ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಇ.ಡಿ. ವಿಚಾರಣೆಗೆ ಹಾಜರಾದ ಕವಿತಾ

Last Updated 20 ಮಾರ್ಚ್ 2023, 13:42 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕಿ ಕೆ.ಕವಿತಾ ಅವರು ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದರು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಪುತ್ರಿ ಕವಿತಾ ಅವರನ್ನು ಮಾರ್ಚ್‌ 11 ರಂದು ಇ.ಡಿ ಅಧಿಕಾರಿಗಳು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.

ಇ.ಡಿ. ವಿಚಾರಣೆಯನ್ನು ಪ್ರಶ್ನಿಸಿ ಕವಿತಾ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಾರ್ಚ್‌ 24ರಂದು ನಡೆಸಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT