ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಇಲ್ಲಿಯ ವಿಶೇಷ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಮಾರ್ಚ್ 24ರಂದು ಮನೀಶ್ ಅವರ ಪ್ರಕರಣಕ್ಕೆ ಸಂಬಂಧಿಸಿದ ವಾದದ ಅಂಶಗಳಿರುವ ಕಿರು ಟಿಪ್ಪಣಿಯನ್ನು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ಬಳಿಕ ವಿಶೇಷ ನ್ಯಾಯಾಧೀಶ ಎಂ. ಕೆ.ನಾಗ್ಪಾಲ್ ಅವರು ಆದೇಶವನ್ನು ಕಾಯ್ದಿರಿಸಿದ್ದರು.
ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಫೆ.26ರಂದು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.
Delhi excise policy case | AAP leader and former Delhi Deputy CM Manish Sisodia to appeal in Delhi Court his bail plea matter after it was rejected by Delhi Special Court.