ಅಬಕಾರಿ ಗುತ್ತಿಗೆಯಲ್ಲಿ ಕವಿತಾ ಅವರು ಲಂಚ ಪಡೆದಿರುವ ಬಗ್ಗೆ ಆರೋಪಗಳಿದ್ದು, ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಹೇಳಿತ್ತು. ₹100 ಕೋಟಿ ಲಂಚ ಪಡೆದ ಆರೋಪದ ಹಗರಣದ ಆರೋಪಿಗಳಲ್ಲಿ ಒಬ್ಬರಾದ ಉದ್ಯಮಿ ಅಮಿತ್ ಅರೋರ ಅವರು ಇ.ಡಿ ವಿಚಾರಣೆ ವೇಳೆ ಕವಿತಾ ಅವರ ಹೆಸರು ಹೇಳಿದ್ದರು.