<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಇಬ್ಬರು ಉದ್ಯಮಿಗಳನ್ನು ಬಂಧಿಸಿದ್ದಾರೆ.</p>.<p>ವಿಜಯ್ ನಾಯರ್ ಮತ್ತು ಅಭಿಷೇಕ್ ಬೋನಪಲ್ಲಿ ಬಂಧಿತ ಆರೋಪಿಗಳು. ಅಬಕಾರಿ ಹಗರಣದ ಹಣ ಅಕ್ರಮ ವರ್ಗಾವಣೆ ಸಂಬಂಧಿಸಿದಂತೆ ಇ.ಡಿ ತನಿಖೆ ನಡೆಸುತ್ತಿದೆ.</p>.<p>ಅಕ್ರಮದ ಆರೋಪ ಬಂದ ಹಿನ್ನೆಲೆಯಲ್ಲಿ ಅಬಕಾರಿ ನೀತಿಯನ್ನು ದೆಹಲಿ ಸರ್ಕಾರ ಹಿಂಪಡೆದಿತ್ತು.</p>.<p>ಈಗಾಗಲೇ ಸಿಬಿಐ ವಶದಲ್ಲಿರುವ ಈ ಇಬ್ಬರನ್ನು ವಶಕ್ಕೆ ನೀಡುವಂತೆ ಇ.ಡಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.</p>.<p>ಹೈದರಾಬಾದ್ ಮೂಲದ ಬೋನಪಲ್ಲಿ ದಕ್ಷಿಣ ಭಾರತದ ಕೆಲ ಮದ್ಯ ವ್ಯಾಪಾರಿಗಳ ಪರ ಲಾಬಿ ನಡೆಸಿದ್ದರು ಎಂಬ ಆರೋಪವಿದೆ.</p>.<p>ನಾಯರ್ ಅವರು, ಈ ಹಿಂದೆ ಎಎಪಿ ಜೊತೆ ನಂಟು ಹೊಂದಿದ್ದ ಕಾರ್ಯಕ್ರಮ ನಿರ್ವಹಣಾ ಕಂಪನಿಯೊಂದರ ಸಿಇಒ ಆಗಿದ್ದು, ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಂಚು ನಡೆಸಿದ್ದರು ಎಂಬುದು ಸಿಬಿಐ ಆರೋಪವಾಗಿದೆ.</p>.<p>ಇದಕ್ಕೂ ಮುನ್ನ, ಇಡಿ ಈ ಹಿಂದೆ ಇಂಡೋಸ್ಪಿರಿಟ್ ಮದ್ಯದ ಕಂಪನಿಯ ಪ್ರವರ್ತಕ ಸಮೀರ್ ಮಹಂದ್ರು, ಜನರಲ್ ಮ್ಯಾನೇಜರ್ ಪೆರ್ನೋಡ್ ರಿಕಾರ್ಡ್, ಬೆನೊಯ್ ಬಾಬು ಮತ್ತು ಅರಬಿಂದೋ ಫಾರ್ಮಾದ ನಿರ್ದೇಶಕ ಮತ್ತು ಪ್ರವರ್ತಕ ಪಿ ಶರತ್ ಚಂದ್ರ ರೆಡ್ಡಿ ಅವರನ್ನು ಬಂಧಿಸಿತ್ತು.</p>.<p>ಈ ಪ್ರಕರಣದಲ್ಲಿ ಇ.ಡಿ ಈವರೆಗೆ 169 ಶೋಧ ಕಾರ್ಯಾಚರಣೆಗಳನ್ನು ನಡೆಸಿದೆ.</p>.<p>ಅಬಕಾರಿ ನೀತಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಇದರಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಈ ಕುರಿತಂತೆ ಇ.ಡಿ ತನಿಖೆ ನಡೆಸುತ್ತಿದೆ.</p>.<p>ಪ್ರಕರಣ ದಾಖಲಾದ ನಂತರ ಸಿಸೋಡಿಯಾ ಮತ್ತು ದೆಹಲಿ ಸರ್ಕಾರದ ಕೆಲವು ಅಧಿಕಾರಿಗಳ ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಇಬ್ಬರು ಉದ್ಯಮಿಗಳನ್ನು ಬಂಧಿಸಿದ್ದಾರೆ.</p>.<p>ವಿಜಯ್ ನಾಯರ್ ಮತ್ತು ಅಭಿಷೇಕ್ ಬೋನಪಲ್ಲಿ ಬಂಧಿತ ಆರೋಪಿಗಳು. ಅಬಕಾರಿ ಹಗರಣದ ಹಣ ಅಕ್ರಮ ವರ್ಗಾವಣೆ ಸಂಬಂಧಿಸಿದಂತೆ ಇ.ಡಿ ತನಿಖೆ ನಡೆಸುತ್ತಿದೆ.</p>.<p>ಅಕ್ರಮದ ಆರೋಪ ಬಂದ ಹಿನ್ನೆಲೆಯಲ್ಲಿ ಅಬಕಾರಿ ನೀತಿಯನ್ನು ದೆಹಲಿ ಸರ್ಕಾರ ಹಿಂಪಡೆದಿತ್ತು.</p>.<p>ಈಗಾಗಲೇ ಸಿಬಿಐ ವಶದಲ್ಲಿರುವ ಈ ಇಬ್ಬರನ್ನು ವಶಕ್ಕೆ ನೀಡುವಂತೆ ಇ.ಡಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.</p>.<p>ಹೈದರಾಬಾದ್ ಮೂಲದ ಬೋನಪಲ್ಲಿ ದಕ್ಷಿಣ ಭಾರತದ ಕೆಲ ಮದ್ಯ ವ್ಯಾಪಾರಿಗಳ ಪರ ಲಾಬಿ ನಡೆಸಿದ್ದರು ಎಂಬ ಆರೋಪವಿದೆ.</p>.<p>ನಾಯರ್ ಅವರು, ಈ ಹಿಂದೆ ಎಎಪಿ ಜೊತೆ ನಂಟು ಹೊಂದಿದ್ದ ಕಾರ್ಯಕ್ರಮ ನಿರ್ವಹಣಾ ಕಂಪನಿಯೊಂದರ ಸಿಇಒ ಆಗಿದ್ದು, ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಂಚು ನಡೆಸಿದ್ದರು ಎಂಬುದು ಸಿಬಿಐ ಆರೋಪವಾಗಿದೆ.</p>.<p>ಇದಕ್ಕೂ ಮುನ್ನ, ಇಡಿ ಈ ಹಿಂದೆ ಇಂಡೋಸ್ಪಿರಿಟ್ ಮದ್ಯದ ಕಂಪನಿಯ ಪ್ರವರ್ತಕ ಸಮೀರ್ ಮಹಂದ್ರು, ಜನರಲ್ ಮ್ಯಾನೇಜರ್ ಪೆರ್ನೋಡ್ ರಿಕಾರ್ಡ್, ಬೆನೊಯ್ ಬಾಬು ಮತ್ತು ಅರಬಿಂದೋ ಫಾರ್ಮಾದ ನಿರ್ದೇಶಕ ಮತ್ತು ಪ್ರವರ್ತಕ ಪಿ ಶರತ್ ಚಂದ್ರ ರೆಡ್ಡಿ ಅವರನ್ನು ಬಂಧಿಸಿತ್ತು.</p>.<p>ಈ ಪ್ರಕರಣದಲ್ಲಿ ಇ.ಡಿ ಈವರೆಗೆ 169 ಶೋಧ ಕಾರ್ಯಾಚರಣೆಗಳನ್ನು ನಡೆಸಿದೆ.</p>.<p>ಅಬಕಾರಿ ನೀತಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಇದರಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಈ ಕುರಿತಂತೆ ಇ.ಡಿ ತನಿಖೆ ನಡೆಸುತ್ತಿದೆ.</p>.<p>ಪ್ರಕರಣ ದಾಖಲಾದ ನಂತರ ಸಿಸೋಡಿಯಾ ಮತ್ತು ದೆಹಲಿ ಸರ್ಕಾರದ ಕೆಲವು ಅಧಿಕಾರಿಗಳ ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>