<p><strong>ನವದೆಹಲಿ</strong>: ‘ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿತ್ತರಿಸಲಾಗುವ ಸುದ್ದಿಗಳು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕೃತ ಪತ್ರಿಕಾ ಪ್ರಕಟಣೆಗಳನ್ನು ಆಧರಿಸಿರಬೇಕು’ ಎಂದು ದೆಹಲಿ ಹೈಕೋರ್ಟ್, ಕೆಲ ಮಾಧ್ಯಮ ಸಂಸ್ಥೆಗಳಿಗೆ ಸೋಮವಾರ ತಾಕೀತು ಮಾಡಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ತನಿಖಾ ಸಂಸ್ಥೆಗಳು ಮಾಧ್ಯಮಗಳಿಗೆ ಸೋರಿಕೆ ಮಾಡಿವೆ. ಅದರಿಂದ ತನ್ನ ಹಕ್ಕಿಗೆ ಧಕ್ಕೆಯಾಗಿದೆ ಎಂದು ಪ್ರಕರಣದ ಆರೋಪಿ ವಿಜಯ್ ನಾಯರ್ ದೂರಿದ್ದರು. ಈ ಸಂಬಂಧ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಸುದ್ದಿಯು ಇ.ಡಿ ಮತ್ತು ಸಿಬಿಐ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಗಳನ್ನು ಆಧರಿಸಿಲ್ಲ ಎಂದು ಹೇಳಿದ ನ್ಯಾಯಮೂರ್ತಿ ಯಶವಂತ್ ಅವರು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದ ಮಾಧ್ಯಮ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿದರು.</p>.<p>‘ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಸುದ್ದಿಗಳು ನಮ್ಮ ಅಧಿಕೃತ ಪ್ರಕಟಣೆಗಳನ್ನು ಆಧರಿಸಿಲ್ಲ’ ಎಂದು ಜಾರಿ ನಿರ್ದೇಶನಾಲಯವು ನ್ಯಾಯಪೀಠಕ್ಕೆ ತಿಳಿಸಿತು.</p>.<p>ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಗಳನ್ನು ಸಿಬಿಐ, ನ್ಯಾಯಾಲಯಕ್ಕೆ ಸಲ್ಲಿಸಿತು. ಅದನ್ನು ಪರಿಶೀಲಿಸಿದ ನ್ಯಾಯಾಮೂರ್ತಿಯವರು ಈಗಾಗಲೇ ಪ್ರಸಾರವಾಗಿರುವ ಸುದ್ದಿಗಳಿಗೂ ಈ ಪ್ರಕಟಣೆಯಲ್ಲಿ ನೀಡಲಾಗಿರುವ ಮಾಹಿತಿಗಳಿಗೂ ಸಂಬಂಧವೇ ಇಲ್ಲ. ತನಿಖಾ ಸಂಸ್ಥೆಗಳು ಮಾಧ್ಯಮಗಳಿಗೆ ಯಾವುದೇ ಮಾಹಿತಿ ಸೋರಿಕೆ ಮಾಡಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದರು.</p>.<p>‘ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಸುದ್ದಿಗಳು ತನಿಖಾ ಸಂಸ್ಥೆಗಳ ಅಧಿಕೃತ ಪ್ರಕಟಣೆಗಳನ್ನು ಆಧರಿಸಿಲ್ಲ. ಹೀಗಿದ್ದ ಮೇಲೆ ಆ ಸುದ್ದಿಗಳ ಮೂಲ ಯಾವುದು. ಆ ಸಂಸ್ಥೆಗಳ ವಿರುದ್ಧ ಯಾವ ಬಗೆಯ ಕ್ರಮ ಕೈಗೊಂಡಿದ್ದೀರಿ ಎಂದು ನ್ಯಾಯಾಲಯವು ದಿ ನ್ಯೂಸ್ ಬ್ರಾಡ್ಕಾಸ್ಟರ್ಸ್ ಆ್ಯಂಡ್ ಡಿಜಿಟಲ್ ಅಸೋಸಿಯೇಷನ್ಗೆ (ಎನ್ಬಿಡಿಎ) ಪ್ರಶ್ನಿಸಿತು.</p>.<p>‘ಮಾಧ್ಯಮಗಳನ್ನು ನಿರ್ಬಂಧಿಸುವ ಅಧಿಕಾರ ತಮಗೆ ಇಲ್ಲ’ ಎಂದು ಎನ್ಬಿಡಿಎ ಪರ ವಕೀಲರು ನ್ಯಾಯಾಲಯಕ್ಕೆ ಹೇಳಿದರು.</p>.<p>‘ಎನ್ಬಿಡಿಎಯನ್ನು ನಾವು ವಿಸರ್ಜಿಸಬೇಕೆ. ಸ್ವಯಂ ನಿಯಂತ್ರಣ ಎಂಬುದು ಕಣ್ಣಾಮುಚ್ಚಾಲೆ ಆಗಿದ್ದಲ್ಲಿ ಎನ್ಬಿಡಿಎಯನ್ನು ಏಕೆ ವಿಸರ್ಜಿಸಬಾರದು. ಸೂಕ್ಷ್ಮ ಮಾಹಿತಿಗಳು ಸುದ್ದಿ ವಾಹಿನಿಗಳಿಗೆ ಹೇಗೆ ದೊರೆತವು’ ಎಂದು ಪ್ರಶ್ನಿಸಿತು.</p>.<p>ಈ ಸಂಬಂಧ ವಿವರವಾದ ವರದಿ ಸಲ್ಲಿಸುವಂತೆ ಎನ್ಬಿಡಿಎಗೆ ಸೂಚಿಸಿದ ನ್ಯಾಯಾಲಯವು ವಿಚಾರಣೆಯನ್ನು ಫೆಬ್ರುವರಿಗೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿತ್ತರಿಸಲಾಗುವ ಸುದ್ದಿಗಳು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕೃತ ಪತ್ರಿಕಾ ಪ್ರಕಟಣೆಗಳನ್ನು ಆಧರಿಸಿರಬೇಕು’ ಎಂದು ದೆಹಲಿ ಹೈಕೋರ್ಟ್, ಕೆಲ ಮಾಧ್ಯಮ ಸಂಸ್ಥೆಗಳಿಗೆ ಸೋಮವಾರ ತಾಕೀತು ಮಾಡಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ತನಿಖಾ ಸಂಸ್ಥೆಗಳು ಮಾಧ್ಯಮಗಳಿಗೆ ಸೋರಿಕೆ ಮಾಡಿವೆ. ಅದರಿಂದ ತನ್ನ ಹಕ್ಕಿಗೆ ಧಕ್ಕೆಯಾಗಿದೆ ಎಂದು ಪ್ರಕರಣದ ಆರೋಪಿ ವಿಜಯ್ ನಾಯರ್ ದೂರಿದ್ದರು. ಈ ಸಂಬಂಧ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಸುದ್ದಿಯು ಇ.ಡಿ ಮತ್ತು ಸಿಬಿಐ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಗಳನ್ನು ಆಧರಿಸಿಲ್ಲ ಎಂದು ಹೇಳಿದ ನ್ಯಾಯಮೂರ್ತಿ ಯಶವಂತ್ ಅವರು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದ ಮಾಧ್ಯಮ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿದರು.</p>.<p>‘ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಸುದ್ದಿಗಳು ನಮ್ಮ ಅಧಿಕೃತ ಪ್ರಕಟಣೆಗಳನ್ನು ಆಧರಿಸಿಲ್ಲ’ ಎಂದು ಜಾರಿ ನಿರ್ದೇಶನಾಲಯವು ನ್ಯಾಯಪೀಠಕ್ಕೆ ತಿಳಿಸಿತು.</p>.<p>ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಗಳನ್ನು ಸಿಬಿಐ, ನ್ಯಾಯಾಲಯಕ್ಕೆ ಸಲ್ಲಿಸಿತು. ಅದನ್ನು ಪರಿಶೀಲಿಸಿದ ನ್ಯಾಯಾಮೂರ್ತಿಯವರು ಈಗಾಗಲೇ ಪ್ರಸಾರವಾಗಿರುವ ಸುದ್ದಿಗಳಿಗೂ ಈ ಪ್ರಕಟಣೆಯಲ್ಲಿ ನೀಡಲಾಗಿರುವ ಮಾಹಿತಿಗಳಿಗೂ ಸಂಬಂಧವೇ ಇಲ್ಲ. ತನಿಖಾ ಸಂಸ್ಥೆಗಳು ಮಾಧ್ಯಮಗಳಿಗೆ ಯಾವುದೇ ಮಾಹಿತಿ ಸೋರಿಕೆ ಮಾಡಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದರು.</p>.<p>‘ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಸುದ್ದಿಗಳು ತನಿಖಾ ಸಂಸ್ಥೆಗಳ ಅಧಿಕೃತ ಪ್ರಕಟಣೆಗಳನ್ನು ಆಧರಿಸಿಲ್ಲ. ಹೀಗಿದ್ದ ಮೇಲೆ ಆ ಸುದ್ದಿಗಳ ಮೂಲ ಯಾವುದು. ಆ ಸಂಸ್ಥೆಗಳ ವಿರುದ್ಧ ಯಾವ ಬಗೆಯ ಕ್ರಮ ಕೈಗೊಂಡಿದ್ದೀರಿ ಎಂದು ನ್ಯಾಯಾಲಯವು ದಿ ನ್ಯೂಸ್ ಬ್ರಾಡ್ಕಾಸ್ಟರ್ಸ್ ಆ್ಯಂಡ್ ಡಿಜಿಟಲ್ ಅಸೋಸಿಯೇಷನ್ಗೆ (ಎನ್ಬಿಡಿಎ) ಪ್ರಶ್ನಿಸಿತು.</p>.<p>‘ಮಾಧ್ಯಮಗಳನ್ನು ನಿರ್ಬಂಧಿಸುವ ಅಧಿಕಾರ ತಮಗೆ ಇಲ್ಲ’ ಎಂದು ಎನ್ಬಿಡಿಎ ಪರ ವಕೀಲರು ನ್ಯಾಯಾಲಯಕ್ಕೆ ಹೇಳಿದರು.</p>.<p>‘ಎನ್ಬಿಡಿಎಯನ್ನು ನಾವು ವಿಸರ್ಜಿಸಬೇಕೆ. ಸ್ವಯಂ ನಿಯಂತ್ರಣ ಎಂಬುದು ಕಣ್ಣಾಮುಚ್ಚಾಲೆ ಆಗಿದ್ದಲ್ಲಿ ಎನ್ಬಿಡಿಎಯನ್ನು ಏಕೆ ವಿಸರ್ಜಿಸಬಾರದು. ಸೂಕ್ಷ್ಮ ಮಾಹಿತಿಗಳು ಸುದ್ದಿ ವಾಹಿನಿಗಳಿಗೆ ಹೇಗೆ ದೊರೆತವು’ ಎಂದು ಪ್ರಶ್ನಿಸಿತು.</p>.<p>ಈ ಸಂಬಂಧ ವಿವರವಾದ ವರದಿ ಸಲ್ಲಿಸುವಂತೆ ಎನ್ಬಿಡಿಎಗೆ ಸೂಚಿಸಿದ ನ್ಯಾಯಾಲಯವು ವಿಚಾರಣೆಯನ್ನು ಫೆಬ್ರುವರಿಗೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>