<p><strong>ನವದೆಹಲಿ:</strong> ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಮಾರ್ಚ್ 17ರ ವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿದೆ.</p>.<p>10 ದಿನಗಳ ಕಾಲ ಸಿಸೋಡಿಯಾ ಅವರನ್ನು ವಶಕ್ಕೆ ನೀಡಬೇಕೆಂದು ಇ.ಡಿ. ಪರ ವಕೀಲ ಜೊಹೆಬ್ ಹೊಸೈನ್ ನ್ಯಾಯಾಲಯವನ್ನು ಕೋರಿದ್ದರು. ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು ಏಳು ದಿನಗಳ ಕಾಲ ವಶಕ್ಕೆ ನೀಡಿ ಆದೇಶ ನೀಡಿದರು.</p>.<p>‘ಹಗರಣದ ಕುರಿತು ಸಿಸೋಡಿಯಾ ಅವರು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಪ್ರಕರಣದ ಇತರ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಅಗತ್ಯ ಇದೆ’ ಎಂದು ಜೊಹೆಬ್ ಹೊಸೈನ್ ಹೇಳಿದರು.</p>.<p>‘ಸಿಸೋಡಿಯಾ ಅವರು ತಮ್ಮ ಮೊಬೈಲ್ ಅನ್ನು ನಾಶಪಡಿಸಿದ್ದು, ಇದು ಪ್ರಮುಖ ಸಾಕ್ಷ್ಯವಾಗಿತ್ತು’ ಎಂದೂ ನ್ಯಾಯಾಲಯಕ್ಕೆ ವಿವರಿಸಿದರು.</p>.<p>ಹಣ ಅಕ್ರಮ ವರ್ಗಾವಣೆ ಜಾಲದ ಜೊತೆ ಸಿಸೋಡಿಯಾ ಅವರಿಗೆ ನಂಟಿದೆ ಮತ್ತು ಹವಾಲ ಮೂಲಗಳ ಮೂಲಕ ಹರಿದು ಬಂದಿರುವ ಹಣದ ಕುರಿತು ತನಿಖೆ ನಡೆಸಲಾಗುವುದು ಎಂದೂ ವಕೀಲರು ಹೇಳಿದ್ದಾರೆ.</p>.<p>‘ಅಬಕಾರಿ ನೀತಿಯನ್ನು ಲೆಫ್ಟಿನೆಂಟ್ ಗವರ್ನರ್ ಒಪ್ಪಿಕೊಂಡಿದ್ದರು ಮತ್ತು ಅವರು ಅದನ್ನು ಪರಿಶೀಲಿಸಿರುತ್ತಾರೆ’ ಎಂದು ಸಿಸೋಡಿಯಾ ಅವರ ಪರ ಹಾಜರಾಗಿದ್ದ ಹಿರಿಯ ವಕೀಲರಾದ ದಯನ್ ಕೃಷ್ಣನ್, ಮೋಹಿತ್ ಮಾಥುರ್ ಮತ್ತು ಸಿದ್ಧಾರ್ಥ ಅಗರ್ವಾಲ್ ನ್ಯಾಯಾಲಯಕ್ಕೆ ತಿಳಿಸಿದರು.</p>.<p>‘ಈ ಪ್ರಕರಣದಲ್ಲಿ ಸಿಸೋಡಿಯಾ ಅವರ ವಿರುದ್ಧ ಇ.ಡಿ.ಗೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ’ ಎಂದರು.</p>.<p><strong>ಬಿಗಿ ಭದ್ರತೆ: </strong>ಸಿಸೋಡಿಯಾ ಅವರನ್ನು ಹಾಜರುಪಡಿಸಿರುವ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಬಿಗಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ನ್ಯಾಯಾಲಯದ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿ ಸಿಸೋಡಿಯಾ ಅವರ ಪರವಾಗಿ ಘೋಷಣೆ ಕೂಗಿದರು.</p>.<p>ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಕೂಡ ಪ್ರತಿಭಟನೆ ನಡೆಸಿದ್ದಾರೆ. ಇ.ಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಗುರುವಾರ ತಿಹಾರ್ ಜೈಲಿನಲ್ಲಿ ಬಂಧಿಸಿದ್ದರು.</p>.<p><strong>ಪ್ರಹ್ಲಾದಗೆ ಹೋಲಿಸಿದ ಕೇಜ್ರಿವಾಲ್: </strong>ದೇಶಕ್ಕಾಗಿ ಮತ್ತು ಮಕ್ಕಳಿಗಾಗಿ ಸೇವೆ ಸಲ್ಲಿಸುವವರನ್ನು ಜೈಲಿಗೆ ಅಟ್ಟಲಾಗುತ್ತಿದೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಈಚೆಗೆ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಿರುವುದನ್ನು ಹಿರಣ್ಯಕಶಿಪು ಮತ್ತು ಪ್ರಹ್ಲಾದ ಕತೆಗೆ ಹೋಲಿಸಿದ್ದಾರೆ.</p>.<p>ದೇವರನ್ನು ಪೂಜಿಸದಂತೆ ಹಿರಣ್ಯಕಶಿಪುಗೆ ಪ್ರಹ್ಲಾದನನ್ನು ತಡೆಯಲು ಸಾಧ್ಯವಾಗಿಲ್ಲವೋ ಹಾಗೆಯೇ ಆಧುನಿಕ ಪ್ರಹ್ಲಾದನನ್ನೂ ತಡೆಯಲಾಗದು ಎಂದು ಟ್ವೀಟ್ ಮಾಡಿದ್ದಾರೆ.</p>.<p><strong>ಭ್ರಷ್ಟಾಚಾರ ಉತ್ತೇಜಿಸುತ್ತಿರುವ ಕೇಜ್ರಿವಾಲ್: </strong>ಅರವಿಂದ ಕೇಜ್ರಿವಾಲ್ ಅವರು ದೆಹಲಿ ಮತ್ತು ಪಂಜಾಬ್ನಲ್ಲಿ ಭ್ರಷ್ಟಾಚಾರವನ್ನು ಉತ್ತೇಜಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಹುಟ್ಟಿದ ಪಕ್ಷವು ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿರುವ ತನ್ನ ಮುಖಂಡರ ರಕ್ಷಣೆಗೆ ನಿಂತಿರುವುದು ವಿಪರ್ಯಾಸ ಎಂದೂ ಕಾಂಗ್ರೆಸ್ ಮುಖಂಡರಾದ ಅಲ್ಕಾ ಲಂಬಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಮಾರ್ಚ್ 17ರ ವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿದೆ.</p>.<p>10 ದಿನಗಳ ಕಾಲ ಸಿಸೋಡಿಯಾ ಅವರನ್ನು ವಶಕ್ಕೆ ನೀಡಬೇಕೆಂದು ಇ.ಡಿ. ಪರ ವಕೀಲ ಜೊಹೆಬ್ ಹೊಸೈನ್ ನ್ಯಾಯಾಲಯವನ್ನು ಕೋರಿದ್ದರು. ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು ಏಳು ದಿನಗಳ ಕಾಲ ವಶಕ್ಕೆ ನೀಡಿ ಆದೇಶ ನೀಡಿದರು.</p>.<p>‘ಹಗರಣದ ಕುರಿತು ಸಿಸೋಡಿಯಾ ಅವರು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಪ್ರಕರಣದ ಇತರ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಅಗತ್ಯ ಇದೆ’ ಎಂದು ಜೊಹೆಬ್ ಹೊಸೈನ್ ಹೇಳಿದರು.</p>.<p>‘ಸಿಸೋಡಿಯಾ ಅವರು ತಮ್ಮ ಮೊಬೈಲ್ ಅನ್ನು ನಾಶಪಡಿಸಿದ್ದು, ಇದು ಪ್ರಮುಖ ಸಾಕ್ಷ್ಯವಾಗಿತ್ತು’ ಎಂದೂ ನ್ಯಾಯಾಲಯಕ್ಕೆ ವಿವರಿಸಿದರು.</p>.<p>ಹಣ ಅಕ್ರಮ ವರ್ಗಾವಣೆ ಜಾಲದ ಜೊತೆ ಸಿಸೋಡಿಯಾ ಅವರಿಗೆ ನಂಟಿದೆ ಮತ್ತು ಹವಾಲ ಮೂಲಗಳ ಮೂಲಕ ಹರಿದು ಬಂದಿರುವ ಹಣದ ಕುರಿತು ತನಿಖೆ ನಡೆಸಲಾಗುವುದು ಎಂದೂ ವಕೀಲರು ಹೇಳಿದ್ದಾರೆ.</p>.<p>‘ಅಬಕಾರಿ ನೀತಿಯನ್ನು ಲೆಫ್ಟಿನೆಂಟ್ ಗವರ್ನರ್ ಒಪ್ಪಿಕೊಂಡಿದ್ದರು ಮತ್ತು ಅವರು ಅದನ್ನು ಪರಿಶೀಲಿಸಿರುತ್ತಾರೆ’ ಎಂದು ಸಿಸೋಡಿಯಾ ಅವರ ಪರ ಹಾಜರಾಗಿದ್ದ ಹಿರಿಯ ವಕೀಲರಾದ ದಯನ್ ಕೃಷ್ಣನ್, ಮೋಹಿತ್ ಮಾಥುರ್ ಮತ್ತು ಸಿದ್ಧಾರ್ಥ ಅಗರ್ವಾಲ್ ನ್ಯಾಯಾಲಯಕ್ಕೆ ತಿಳಿಸಿದರು.</p>.<p>‘ಈ ಪ್ರಕರಣದಲ್ಲಿ ಸಿಸೋಡಿಯಾ ಅವರ ವಿರುದ್ಧ ಇ.ಡಿ.ಗೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ’ ಎಂದರು.</p>.<p><strong>ಬಿಗಿ ಭದ್ರತೆ: </strong>ಸಿಸೋಡಿಯಾ ಅವರನ್ನು ಹಾಜರುಪಡಿಸಿರುವ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಬಿಗಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ನ್ಯಾಯಾಲಯದ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿ ಸಿಸೋಡಿಯಾ ಅವರ ಪರವಾಗಿ ಘೋಷಣೆ ಕೂಗಿದರು.</p>.<p>ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಕೂಡ ಪ್ರತಿಭಟನೆ ನಡೆಸಿದ್ದಾರೆ. ಇ.ಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಗುರುವಾರ ತಿಹಾರ್ ಜೈಲಿನಲ್ಲಿ ಬಂಧಿಸಿದ್ದರು.</p>.<p><strong>ಪ್ರಹ್ಲಾದಗೆ ಹೋಲಿಸಿದ ಕೇಜ್ರಿವಾಲ್: </strong>ದೇಶಕ್ಕಾಗಿ ಮತ್ತು ಮಕ್ಕಳಿಗಾಗಿ ಸೇವೆ ಸಲ್ಲಿಸುವವರನ್ನು ಜೈಲಿಗೆ ಅಟ್ಟಲಾಗುತ್ತಿದೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಈಚೆಗೆ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಿರುವುದನ್ನು ಹಿರಣ್ಯಕಶಿಪು ಮತ್ತು ಪ್ರಹ್ಲಾದ ಕತೆಗೆ ಹೋಲಿಸಿದ್ದಾರೆ.</p>.<p>ದೇವರನ್ನು ಪೂಜಿಸದಂತೆ ಹಿರಣ್ಯಕಶಿಪುಗೆ ಪ್ರಹ್ಲಾದನನ್ನು ತಡೆಯಲು ಸಾಧ್ಯವಾಗಿಲ್ಲವೋ ಹಾಗೆಯೇ ಆಧುನಿಕ ಪ್ರಹ್ಲಾದನನ್ನೂ ತಡೆಯಲಾಗದು ಎಂದು ಟ್ವೀಟ್ ಮಾಡಿದ್ದಾರೆ.</p>.<p><strong>ಭ್ರಷ್ಟಾಚಾರ ಉತ್ತೇಜಿಸುತ್ತಿರುವ ಕೇಜ್ರಿವಾಲ್: </strong>ಅರವಿಂದ ಕೇಜ್ರಿವಾಲ್ ಅವರು ದೆಹಲಿ ಮತ್ತು ಪಂಜಾಬ್ನಲ್ಲಿ ಭ್ರಷ್ಟಾಚಾರವನ್ನು ಉತ್ತೇಜಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಹುಟ್ಟಿದ ಪಕ್ಷವು ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿರುವ ತನ್ನ ಮುಖಂಡರ ರಕ್ಷಣೆಗೆ ನಿಂತಿರುವುದು ವಿಪರ್ಯಾಸ ಎಂದೂ ಕಾಂಗ್ರೆಸ್ ಮುಖಂಡರಾದ ಅಲ್ಕಾ ಲಂಬಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>