ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್‌ಫ್ಲುಯೆಂಝಾ ಪತ್ತೆಗೆ ಮುಂಚಿತವಾಗಿ ಪರೀಕ್ಷೆ ನಡೆಸಲು ಸೂಚನೆ: ದೆಹಲಿ ಸಚಿವ

Last Updated 17 ಮಾರ್ಚ್ 2023, 12:22 IST
ಅಕ್ಷರ ಗಾತ್ರ

ನವದೆಹಲಿ: ಕೆಮ್ಮು, ನೆಗಡಿ (ಇನ್‌ಫ್ಲುಯೆಂಝಾ) ಪ್ರಕರಣಗಳ ಪತ್ತೆಹಚ್ಚುವ ಸಲುವಾಗಿ ಜನರನ್ನು ಮುಂಚಿತವಾಗಿಯೇ ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸೌರಭ್‌ ಭಾರದ್ವಾಜ್‌ ಅವರು ಶುಕ್ರವಾರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಇನ್‌ಫ್ಲುಯೆಂಝಾ ಪ್ರಕರಣಗಳು ಗರಿಷ್ಠ ಮಟ್ಟದಲ್ಲಿ ವರದಿಯಾಗುತ್ತಿವೆ. ಈ ಪ್ರಮಾಣವು ಮಾರ್ಚ್‌ ಅಂತ್ಯಕ್ಕೆ ತಗ್ಗಲಿದೆ. ದೇಶದ ಹಲವು ಭಾಗಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಇನ್‌ಫ್ಲುಯೆಂಝಾ ಪ್ರಕರಣಗಳು ವರದಿಯಾಗುತ್ತಿವೆ ಎಂದರು.

ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ರೋಗ ಪ್ರಸರಣ ತಡೆಯುವುದು, ಕೈತೊಳೆಯುವುದಂಥ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸದ್ಯ ಗಮನ ಕೇಂದ್ರೀಕರಿಸಲಾಗಿದೆ ಎಂದರು.

ಅಸ್ತಮಾ, ಕೋವಿಡ್‌ನಂಥ ಕಾಯಿಲೆಯಿಂದ ಬಳಲುತ್ತಿರುವವರು, 65 ವರ್ಷ ಮೇಲ್ಪಟ್ಟವರು ಮತ್ತು 5 ವರ್ಷ ಒಳಗಿನ ಮಕ್ಕಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT