<p><strong>ನವದೆಹಲಿ:</strong> ‘ಫೆಬ್ರುವರಿ 2025ರೊಳಗೆ ಯಮುನಾ ನದಿಯ ನೀರನ್ನು ಸ್ನಾನಕ್ಕೆ ಬಳಸುವಷ್ಟು ಶುದ್ಧವಾಗಿಸಲು ನಮ್ಮ ಸರ್ಕಾರ ಆರು ಅಂಶಗಳ ಯೋಜನೆ ಸಿದ್ಧಪಡಿಸಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.</p>.<p>‘ಹಾಲಿ ಚಾಲ್ತಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಸಾಮರ್ಥ್ಯವನ್ನು ಹೆಚ್ಚಿಸಿ, ಮೇಲ್ದರ್ಜೆಗೇರಿಸುವುದರ ಜೊತೆಗೆ ಹೊಸದಾಗಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಅವರು ತಿಳಿಸಿದರು.</p>.<p>‘ಈ ಮೂಲಕ, ನಿತ್ಯ ತ್ಯಾಜ್ಯ ನೀರಿನ ಸಂಸ್ಕರಣೆಯ ಪ್ರಮಾಣವನ್ನು 600 ದಶಲಕ್ಷ ಗ್ಯಾಲನ್ನಿಂದ 750 ರಿಂದ 800 ದಶಲಕ್ಷ ಗ್ಯಾಲನ್ಗೆ (ಎಂಜಿಡಿ) ಏರಿಸುವ ಯೋಜನೆಯಿದೆ’ ಎಂದು ಕೇಜ್ರಿವಾಲ್ ತಿಳಿಸಿದರು.</p>.<p>‘ನಜಾಫ್ಗಡ, ಬಾದ್ಷಾಪುರ, ಸಪ್ಲಿಮೆಂಟರಿ ಮತ್ತು ಗಾಜಿಪುರ ಭಾಗದಿಂದ ಪ್ರಮುಖವಾಗಿ ಸೇರುತ್ತಿರುವ ತ್ಯಾಜ್ಯ ನೀರನ್ನು ಆ ಸ್ಥಳಗಳಲ್ಲಿಯೇ ಸಂಸ್ಕರಿಸಲಾಗುತ್ತದೆ’ ಎಂದು ಅವರು ಹೇಳಿದರು.</p>.<p>ಅಲ್ಲದೆ ಯಮುನಾ ನದಿಗೆಕೈಗಾರಿಕಾ ತ್ಯಾಜ್ಯ ಹರಿಸುವ ಕೈಗಾರಿಕೆಗಳನ್ನು ಸರ್ಕಾರ ಮುಚ್ಚಿಸಲಿದೆ ಎಂದು ಕೇಜ್ರಿವಾಲ್ ತಿಳಿಸಿದರು.</p>.<p>’ಜುಗ್ಗಿ ಜೋಪ್ರಿ’ಯಲ್ಲಿ ಸಂಗ್ರಹವಾಗುವ ತ್ಯಾಜ್ಯ ನೀರು, ಮಳೆ ನೀರು ಹರಿಯುವ ಚರಂಡಿಗಳ ಮೂಲಕ ಯಮುನಾ ನದಿ ಸೇರುತ್ತದೆ. ಈ ತಾಜ್ಯ ನೀರನ್ನು ಒಳಚರಂಡಿ ಜಾಲಕ್ಕೆ ಜೋಡಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಫೆಬ್ರುವರಿ 2025ರೊಳಗೆ ಯಮುನಾ ನದಿಯ ನೀರನ್ನು ಸ್ನಾನಕ್ಕೆ ಬಳಸುವಷ್ಟು ಶುದ್ಧವಾಗಿಸಲು ನಮ್ಮ ಸರ್ಕಾರ ಆರು ಅಂಶಗಳ ಯೋಜನೆ ಸಿದ್ಧಪಡಿಸಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.</p>.<p>‘ಹಾಲಿ ಚಾಲ್ತಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಸಾಮರ್ಥ್ಯವನ್ನು ಹೆಚ್ಚಿಸಿ, ಮೇಲ್ದರ್ಜೆಗೇರಿಸುವುದರ ಜೊತೆಗೆ ಹೊಸದಾಗಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಅವರು ತಿಳಿಸಿದರು.</p>.<p>‘ಈ ಮೂಲಕ, ನಿತ್ಯ ತ್ಯಾಜ್ಯ ನೀರಿನ ಸಂಸ್ಕರಣೆಯ ಪ್ರಮಾಣವನ್ನು 600 ದಶಲಕ್ಷ ಗ್ಯಾಲನ್ನಿಂದ 750 ರಿಂದ 800 ದಶಲಕ್ಷ ಗ್ಯಾಲನ್ಗೆ (ಎಂಜಿಡಿ) ಏರಿಸುವ ಯೋಜನೆಯಿದೆ’ ಎಂದು ಕೇಜ್ರಿವಾಲ್ ತಿಳಿಸಿದರು.</p>.<p>‘ನಜಾಫ್ಗಡ, ಬಾದ್ಷಾಪುರ, ಸಪ್ಲಿಮೆಂಟರಿ ಮತ್ತು ಗಾಜಿಪುರ ಭಾಗದಿಂದ ಪ್ರಮುಖವಾಗಿ ಸೇರುತ್ತಿರುವ ತ್ಯಾಜ್ಯ ನೀರನ್ನು ಆ ಸ್ಥಳಗಳಲ್ಲಿಯೇ ಸಂಸ್ಕರಿಸಲಾಗುತ್ತದೆ’ ಎಂದು ಅವರು ಹೇಳಿದರು.</p>.<p>ಅಲ್ಲದೆ ಯಮುನಾ ನದಿಗೆಕೈಗಾರಿಕಾ ತ್ಯಾಜ್ಯ ಹರಿಸುವ ಕೈಗಾರಿಕೆಗಳನ್ನು ಸರ್ಕಾರ ಮುಚ್ಚಿಸಲಿದೆ ಎಂದು ಕೇಜ್ರಿವಾಲ್ ತಿಳಿಸಿದರು.</p>.<p>’ಜುಗ್ಗಿ ಜೋಪ್ರಿ’ಯಲ್ಲಿ ಸಂಗ್ರಹವಾಗುವ ತ್ಯಾಜ್ಯ ನೀರು, ಮಳೆ ನೀರು ಹರಿಯುವ ಚರಂಡಿಗಳ ಮೂಲಕ ಯಮುನಾ ನದಿ ಸೇರುತ್ತದೆ. ಈ ತಾಜ್ಯ ನೀರನ್ನು ಒಳಚರಂಡಿ ಜಾಲಕ್ಕೆ ಜೋಡಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>