<p><strong>ನವದೆಹಲಿ</strong>: ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬದವರಿಗೆ ಆರ್ಥಿಕ ನೆರವು ನೀಡುವ ‘ಮುಖ್ಯಮಂತ್ರಿ ಕೋವಿಡ್–19 ಪರಿವಾರ ಆರ್ಥಿಕ ಸಹಾಯ ಯೋಜನೆ‘ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಚಾಲನೆ ನೀಡಿದರು.</p>.<p>ಈ ಯೋಜನೆಯಡಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರತಿ ಕುಟುಂಬಕ್ಕೆ ₹50 ಸಾವಿರ ಎಕ್ಸ್ಗ್ರೇಷಿಯಾ ನೀಡಲಾಗುತ್ತದೆ. ಸಂತ್ರಸ್ತ ಕುಟುಂಬಕ್ಕೆ ಮೃತ ವ್ಯಕ್ತಿಯೊಬ್ಬರೇ ದುಡಿಮೆಯ ಆಧಾರವಾಗಿದ್ದರೆ, ಅಂಥ ಕುಟುಂಬಕ್ಕೆ ಹೆಚ್ಚುವರಿಯಾಗಿ ಮಾಸಿಕ ₹2500 ನೀಡಲಾಗುತ್ತದೆ.</p>.<p>ಯೋಜನೆಗೆ ಚಾಲನೆ ನೀಡಿ, ಆನ್ಲೈನ್ ಪೋರ್ಟಲ್ ಉದ್ಘಾಟಿಸಿ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೇಜ್ರಿವಾಲ್, ಕೊರೊನಾ ಸೋಂಕಿನ ಎರಡನೇ ಅಲೆ, ದೆಹಲಿಯ ಬಹುತೇಕ ಎಲ್ಲ ಕುಟುಂಬಗಳ ಮೇಲೂ ತೀವ್ರ ಪರಿಣಾಮ ಬೀರಿತ್ತು. ಸೋಂಕಿನಿಂದ ಅನೇಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.</p>.<p>‘ಎರಡನೇ ಅಲೆಯಲ್ಲಿ ಹಲವು ಮಕ್ಕಳು ತಂದೆ ತಾಯಿಯರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಅನೇಕ ಕುಟುಂಬಗಳು, ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದ ಮನೆಯ ಯಜಮಾನನ್ನು ಕಳೆದುಕೊಂಡಿದ್ದಾರೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಒಂದು ಜವಾಬ್ದಾರಿಯುತ ಸರ್ಕಾರವಾಗಿ, ನಾವು ಈ ಯೋಜನೆಯನ್ನು ರೂಪಿಸಿದ್ದೇವೆ‘ ಎಂದು ವಿವರಿಸಿದರು.</p>.<p>‘ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿ ಸರ್ಕಾರದಿಂದ ಆರ್ಥಿಕ ನೆರವು ಬಯಸುವವರು ಈಗ ಉದ್ಘಾಟಿಸಿರುವ ಆನ್ಲೈನ್ ಪೋರ್ಟೆಲ್ನಲ್ಲಿ ತಮ್ಮ ಹೆಸರು ನೋಂದಯಿಸಿಕೊಳ್ಳಬಹುದು. ನಮ್ಮ ಪ್ರತಿನಿಧಿಗಳು, ಅಂಥ ಕುಟುಂಬದವರನ್ನು ಭೇಟಿ ಮಾಡಿ, ಅವರಿಗೆ ಅರ್ಜಿ ನೀಡಿ, ಭರ್ತಿ ಮಾಡಲು ನೆರವಾಗುತ್ತಾರೆ‘ ಎಂದು ಹೇಳಿದರು.</p>.<p>‘ದಾಖಲೆಗಳ ಕೊರತೆ ಮತ್ತಿತರ ಕಾರಣಗಳಿಂದ ಅರ್ಜಿಯನ್ನು ತಿರಸ್ಕರಿಸುವುದಿಲ್ಲ, ಬದಲಿಗೆ ಅವರಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ನೆರವಾಗುತ್ತಾರೆ‘ ಎಂದು ಹೇಳಿದರು. ‘ಸಂತ್ರಸ್ಥ ಕುಟುಂಬದವರಿಗೆ ತ್ವರಿತವಾಗಿ ಆರ್ಥಿಕ ನೆರವು ತಲುಪುವಂತಾಗಬೇಕು ಎಂಬುದು ನಮ್ಮ ಗುರಿಯಾಗಿದೆ‘ ಎಂದು ಕೇಜ್ರಿವಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬದವರಿಗೆ ಆರ್ಥಿಕ ನೆರವು ನೀಡುವ ‘ಮುಖ್ಯಮಂತ್ರಿ ಕೋವಿಡ್–19 ಪರಿವಾರ ಆರ್ಥಿಕ ಸಹಾಯ ಯೋಜನೆ‘ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಚಾಲನೆ ನೀಡಿದರು.</p>.<p>ಈ ಯೋಜನೆಯಡಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರತಿ ಕುಟುಂಬಕ್ಕೆ ₹50 ಸಾವಿರ ಎಕ್ಸ್ಗ್ರೇಷಿಯಾ ನೀಡಲಾಗುತ್ತದೆ. ಸಂತ್ರಸ್ತ ಕುಟುಂಬಕ್ಕೆ ಮೃತ ವ್ಯಕ್ತಿಯೊಬ್ಬರೇ ದುಡಿಮೆಯ ಆಧಾರವಾಗಿದ್ದರೆ, ಅಂಥ ಕುಟುಂಬಕ್ಕೆ ಹೆಚ್ಚುವರಿಯಾಗಿ ಮಾಸಿಕ ₹2500 ನೀಡಲಾಗುತ್ತದೆ.</p>.<p>ಯೋಜನೆಗೆ ಚಾಲನೆ ನೀಡಿ, ಆನ್ಲೈನ್ ಪೋರ್ಟಲ್ ಉದ್ಘಾಟಿಸಿ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೇಜ್ರಿವಾಲ್, ಕೊರೊನಾ ಸೋಂಕಿನ ಎರಡನೇ ಅಲೆ, ದೆಹಲಿಯ ಬಹುತೇಕ ಎಲ್ಲ ಕುಟುಂಬಗಳ ಮೇಲೂ ತೀವ್ರ ಪರಿಣಾಮ ಬೀರಿತ್ತು. ಸೋಂಕಿನಿಂದ ಅನೇಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.</p>.<p>‘ಎರಡನೇ ಅಲೆಯಲ್ಲಿ ಹಲವು ಮಕ್ಕಳು ತಂದೆ ತಾಯಿಯರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಅನೇಕ ಕುಟುಂಬಗಳು, ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದ ಮನೆಯ ಯಜಮಾನನ್ನು ಕಳೆದುಕೊಂಡಿದ್ದಾರೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಒಂದು ಜವಾಬ್ದಾರಿಯುತ ಸರ್ಕಾರವಾಗಿ, ನಾವು ಈ ಯೋಜನೆಯನ್ನು ರೂಪಿಸಿದ್ದೇವೆ‘ ಎಂದು ವಿವರಿಸಿದರು.</p>.<p>‘ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿ ಸರ್ಕಾರದಿಂದ ಆರ್ಥಿಕ ನೆರವು ಬಯಸುವವರು ಈಗ ಉದ್ಘಾಟಿಸಿರುವ ಆನ್ಲೈನ್ ಪೋರ್ಟೆಲ್ನಲ್ಲಿ ತಮ್ಮ ಹೆಸರು ನೋಂದಯಿಸಿಕೊಳ್ಳಬಹುದು. ನಮ್ಮ ಪ್ರತಿನಿಧಿಗಳು, ಅಂಥ ಕುಟುಂಬದವರನ್ನು ಭೇಟಿ ಮಾಡಿ, ಅವರಿಗೆ ಅರ್ಜಿ ನೀಡಿ, ಭರ್ತಿ ಮಾಡಲು ನೆರವಾಗುತ್ತಾರೆ‘ ಎಂದು ಹೇಳಿದರು.</p>.<p>‘ದಾಖಲೆಗಳ ಕೊರತೆ ಮತ್ತಿತರ ಕಾರಣಗಳಿಂದ ಅರ್ಜಿಯನ್ನು ತಿರಸ್ಕರಿಸುವುದಿಲ್ಲ, ಬದಲಿಗೆ ಅವರಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ನೆರವಾಗುತ್ತಾರೆ‘ ಎಂದು ಹೇಳಿದರು. ‘ಸಂತ್ರಸ್ಥ ಕುಟುಂಬದವರಿಗೆ ತ್ವರಿತವಾಗಿ ಆರ್ಥಿಕ ನೆರವು ತಲುಪುವಂತಾಗಬೇಕು ಎಂಬುದು ನಮ್ಮ ಗುರಿಯಾಗಿದೆ‘ ಎಂದು ಕೇಜ್ರಿವಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>