<p><strong>ನವದೆಹಲಿ:</strong> ಈ ಸಾಲಿನ ಪದ್ಮ (ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ) ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರುಗಳನ್ನು ಶಿಫಾರಸು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ʼಈ ವರ್ಷದ ಪದ್ಮ ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರುಗಳನ್ನು ಕಳುಹಿಸಿಕೊಡಲು ದೆಹಲಿ ಸರ್ಕಾರ ನಿರ್ಧರಿಸಿದೆ. ನಾವು ಅವರಿಗೆ (ಆರೋಗ್ಯ ಕಾರ್ಯಕರ್ತರಿಗೆ) ಕೃತಜ್ಞರಾಗಿರುತ್ತೇವೆ ಮತ್ತು ಗೌರವ ಸಲ್ಲಿಸಲು ಬಯಸುತ್ತೇವೆʼ ಎಂದು ತಿಳಿಸಿದ್ದಾರೆ.</p>.<p>ʼಸಾರ್ವಜನಿಕರು ನಮಗೆ ಹೆಸರುಗಳನ್ನು ಸೂಚಿಸಲಿದ್ದಾರೆ. ಜನರು ಅವರ ಸಂದೇಶವನ್ನು padmaawards.delhi@gmail.comಗೆ ಆಗಸ್ಟ್ 15 ಮೇಲ್ ಮಾಡಬಹದುʼ ಎಂದು ಹೇಳಿದ್ದಾರೆ.</p>.<p>ʼನಾವು ಪರಾಮರ್ಶಕ ಸಮಿತಿ ರಚಿಸಿದ್ದು, ಆಗಸ್ಟ್ 15ರ ಬಳಿಕ ಪಟ್ಟಿ ಬಿಡುಗಡೆ ಮಾಡಲಿದೆ. ಸಮಿತಿಯು ಸರ್ಕಾರಕ್ಕೆ ನಾಮ ನಿರ್ದೇಶನ ಮಾಡಲಿದೆ. ಅದಾದ ಬಳಿಕ ಅಂತಿಮ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದುʼ ಎಂದೂ ಮಾಹಿತಿ ನೀಡಿದ್ದಾರೆ.</p>.<p>ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು ಸರ್ಕಾರದ ವೆಬ್ಸೈಟ್ಗೆ ಸೆಪ್ಟೆಂಬರ್ 15ರ ವರೆಗೆ ಕಳುಹಿಸಿಕೊಡಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಈ ಸಾಲಿನ ಪದ್ಮ (ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ) ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರುಗಳನ್ನು ಶಿಫಾರಸು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ʼಈ ವರ್ಷದ ಪದ್ಮ ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರುಗಳನ್ನು ಕಳುಹಿಸಿಕೊಡಲು ದೆಹಲಿ ಸರ್ಕಾರ ನಿರ್ಧರಿಸಿದೆ. ನಾವು ಅವರಿಗೆ (ಆರೋಗ್ಯ ಕಾರ್ಯಕರ್ತರಿಗೆ) ಕೃತಜ್ಞರಾಗಿರುತ್ತೇವೆ ಮತ್ತು ಗೌರವ ಸಲ್ಲಿಸಲು ಬಯಸುತ್ತೇವೆʼ ಎಂದು ತಿಳಿಸಿದ್ದಾರೆ.</p>.<p>ʼಸಾರ್ವಜನಿಕರು ನಮಗೆ ಹೆಸರುಗಳನ್ನು ಸೂಚಿಸಲಿದ್ದಾರೆ. ಜನರು ಅವರ ಸಂದೇಶವನ್ನು padmaawards.delhi@gmail.comಗೆ ಆಗಸ್ಟ್ 15 ಮೇಲ್ ಮಾಡಬಹದುʼ ಎಂದು ಹೇಳಿದ್ದಾರೆ.</p>.<p>ʼನಾವು ಪರಾಮರ್ಶಕ ಸಮಿತಿ ರಚಿಸಿದ್ದು, ಆಗಸ್ಟ್ 15ರ ಬಳಿಕ ಪಟ್ಟಿ ಬಿಡುಗಡೆ ಮಾಡಲಿದೆ. ಸಮಿತಿಯು ಸರ್ಕಾರಕ್ಕೆ ನಾಮ ನಿರ್ದೇಶನ ಮಾಡಲಿದೆ. ಅದಾದ ಬಳಿಕ ಅಂತಿಮ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದುʼ ಎಂದೂ ಮಾಹಿತಿ ನೀಡಿದ್ದಾರೆ.</p>.<p>ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು ಸರ್ಕಾರದ ವೆಬ್ಸೈಟ್ಗೆ ಸೆಪ್ಟೆಂಬರ್ 15ರ ವರೆಗೆ ಕಳುಹಿಸಿಕೊಡಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>