<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣ ಸಾಧಿಸುವ ಸಂಬಂಧ ಕೇಂದ್ರ ಮತ್ತು ದೆಹಲಿ ಸರ್ಕಾರಗಳ ನಡುವೆ ಉದ್ಭವಿಸಿರುವ ಕಾನೂನಾತ್ಮಕ ವಿವಾದ ಕುರಿತ ವಿಚಾರಣೆಯನ್ನು ಸಾಂವಿಧಾನಿಕ ಪೀಠಕ್ಕೆ ವಹಿಸುವ ನಿಟ್ಟಿನಲ್ಲಿ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>‘ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವಹಿಸುವ ಕುರಿತು ಪರಿಶೀಲನೆ ನಡೆಸಿ, ಆದಷ್ಟು ಶೀಘ್ರ ನಿರ್ಧಾರ ಪ್ರಕಟಿಸುತ್ತೇವೆ’ ಎಂದು ಗುರುವಾರ ಹೇಳಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ, ಈ ಸಂಬಂಧದ ತೀರ್ಪನ್ನು ಕಾಯ್ದಿರಿಸಿತು.</p>.<p>ಸಾಂವಿಧಾನಿಕ ಪೀಠದ ಮೂಲಕ ಈ ವಿಷಯವನ್ನು ಇತ್ಯರ್ಥಪಡಿಸುವಂತೆ ಕೋರಿ ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಅದನ್ನು ವಿರೋಧಿಸಿ ದೆಹಲಿ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮಂಡಿಸಿದ ವಾದವನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಆಲಿಸಿತು.</p>.<p>2018ರಲ್ಲಿ ಸಾಂವಿಧಾನಿಕ ಪೀಠ ನೀಡಿರುವ ತೀರ್ಪಿನಲ್ಲಿ ಯಾವುದೇ ರೀತಿಯ ಅಸ್ಪಷ್ಟತೆ ಇಲ್ಲ. ಒಂದೊಮ್ಮೆ ಅಸ್ಪಷ್ಟತೆ ಇದ್ದರೆ, ಅದನ್ನು ಇದೇ ಪೀಠ ನಿರ್ಧರಿಸಬಹುದಾಗಿದೆ ಎಂದು ಸಿಂಘ್ವಿ ಹೇಳಿದರು.</p>.<p>‘ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವಹಿಸಿದಲ್ಲಿ ದೆಹಲಿ ಸರ್ಕಾರಕ್ಕೆ ಏನಾದರೂ ಸಮಸ್ಯೆ ಇದೆಯೇ?’ ಎಂದು ಪೀಠವು ಸಿಂಘ್ವಿ ಅವರನ್ನು ಪ್ರಶ್ನಿಸಿತು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/key-accused-in-jahangirpuri-violence-arrested-in-west-bengal-932270.html" itemprop="url">ದೆಹಲಿಯ ಜಹಾಂಗಿರ್ಪುರಿ ಹಿಂಸಾಚಾರ: ಪ್ರಮುಖ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ </a></p>.<p>ಪ್ರಕರಣ ಕುರಿತು ಸಾಂವಿಧಾನಿಕ ಪೀಠ ಈ ಹಿಂದೆ ನೀಡಿರುವ ತೀರ್ಪಿನಲ್ಲಿ ಯಾವುದೇ ವಿಧವಾದ ಮಾರ್ಗಸೂಚಿಯನ್ನು ನೀಡಿಲ್ಲ. ಈ ಕಾರಣದಿಂದ ಪ್ರಕರಣವನ್ನು ಮತ್ತೊಮ್ಮೆ ವಿಸ್ತೃತ ಪೀಠದೆದುರೇ ವಿಚಾರಣೆಗೆ ಇರಿಸಬೇಕು ಎಂದು ತುಷಾರ್ ಮೆಹ್ತಾ ಕೋರಿದರು.</p>.<p>ದೆಹಲಿಯು ರಾಷ್ಟ್ರದ ರಾಜಧಾನಿ ಆಗಿರುವುದರಿಂದ ಇಲ್ಲಿನ ಆಡಳಿತಾತ್ಮಕ ಸೇವೆಗಳ ಮೇಲೆ ತಾನೇ ನಿಯಂತ್ರಣ ಹೊಂದುವ ಅಗತ್ಯವಿದೆ ಎಂದು ಬುಧವಾರ ನಡೆದ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಪ್ರತಿಪಾದಿಸಿತ್ತು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/tmc-mp-mahua-moitra-complaint-decathlon-mobile-number-for-trousers-purchase-violating-privacy-laws-932237.html" itemprop="url">ಪ್ಯಾಂಟ್ ಖರೀದಿಗೂ ಮೊಬೈಲ್ ಸಂಖ್ಯೆ; ಡೆಕಾಥ್ಲಾನ್ ವಿರುದ್ಧ ಸಂಸದೆ ಮಹುವಾ ಕಿಡಿ </a></p>.<p>ದೆಹಲಿ ಸರ್ಕಾರವು ಶಾಸಕಾಂಗ ಸಭೆ ಅಥವಾ ಮಂತ್ರಿಮಂಡಳವನ್ನು ಹೊಂದಿದ್ದರೂ ಕೇಂದ್ರ ಸರ್ಕಾರ ಪ್ರಮುಖ ಪಾತ್ರ ನಿರ್ವಹಿಸುವ ಅಗತ್ಯವಿದೆ ಎಂದೂ ಕೇಂದ್ರ ವಾದಿಸಿತ್ತು. ಇದಕ್ಕೆ ದೆಹಲಿ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣ ಸಾಧಿಸುವ ಸಂಬಂಧ ಕೇಂದ್ರ ಮತ್ತು ದೆಹಲಿ ಸರ್ಕಾರಗಳ ನಡುವೆ ಉದ್ಭವಿಸಿರುವ ಕಾನೂನಾತ್ಮಕ ವಿವಾದ ಕುರಿತ ವಿಚಾರಣೆಯನ್ನು ಸಾಂವಿಧಾನಿಕ ಪೀಠಕ್ಕೆ ವಹಿಸುವ ನಿಟ್ಟಿನಲ್ಲಿ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>‘ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವಹಿಸುವ ಕುರಿತು ಪರಿಶೀಲನೆ ನಡೆಸಿ, ಆದಷ್ಟು ಶೀಘ್ರ ನಿರ್ಧಾರ ಪ್ರಕಟಿಸುತ್ತೇವೆ’ ಎಂದು ಗುರುವಾರ ಹೇಳಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ, ಈ ಸಂಬಂಧದ ತೀರ್ಪನ್ನು ಕಾಯ್ದಿರಿಸಿತು.</p>.<p>ಸಾಂವಿಧಾನಿಕ ಪೀಠದ ಮೂಲಕ ಈ ವಿಷಯವನ್ನು ಇತ್ಯರ್ಥಪಡಿಸುವಂತೆ ಕೋರಿ ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಅದನ್ನು ವಿರೋಧಿಸಿ ದೆಹಲಿ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮಂಡಿಸಿದ ವಾದವನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಆಲಿಸಿತು.</p>.<p>2018ರಲ್ಲಿ ಸಾಂವಿಧಾನಿಕ ಪೀಠ ನೀಡಿರುವ ತೀರ್ಪಿನಲ್ಲಿ ಯಾವುದೇ ರೀತಿಯ ಅಸ್ಪಷ್ಟತೆ ಇಲ್ಲ. ಒಂದೊಮ್ಮೆ ಅಸ್ಪಷ್ಟತೆ ಇದ್ದರೆ, ಅದನ್ನು ಇದೇ ಪೀಠ ನಿರ್ಧರಿಸಬಹುದಾಗಿದೆ ಎಂದು ಸಿಂಘ್ವಿ ಹೇಳಿದರು.</p>.<p>‘ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವಹಿಸಿದಲ್ಲಿ ದೆಹಲಿ ಸರ್ಕಾರಕ್ಕೆ ಏನಾದರೂ ಸಮಸ್ಯೆ ಇದೆಯೇ?’ ಎಂದು ಪೀಠವು ಸಿಂಘ್ವಿ ಅವರನ್ನು ಪ್ರಶ್ನಿಸಿತು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/key-accused-in-jahangirpuri-violence-arrested-in-west-bengal-932270.html" itemprop="url">ದೆಹಲಿಯ ಜಹಾಂಗಿರ್ಪುರಿ ಹಿಂಸಾಚಾರ: ಪ್ರಮುಖ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ </a></p>.<p>ಪ್ರಕರಣ ಕುರಿತು ಸಾಂವಿಧಾನಿಕ ಪೀಠ ಈ ಹಿಂದೆ ನೀಡಿರುವ ತೀರ್ಪಿನಲ್ಲಿ ಯಾವುದೇ ವಿಧವಾದ ಮಾರ್ಗಸೂಚಿಯನ್ನು ನೀಡಿಲ್ಲ. ಈ ಕಾರಣದಿಂದ ಪ್ರಕರಣವನ್ನು ಮತ್ತೊಮ್ಮೆ ವಿಸ್ತೃತ ಪೀಠದೆದುರೇ ವಿಚಾರಣೆಗೆ ಇರಿಸಬೇಕು ಎಂದು ತುಷಾರ್ ಮೆಹ್ತಾ ಕೋರಿದರು.</p>.<p>ದೆಹಲಿಯು ರಾಷ್ಟ್ರದ ರಾಜಧಾನಿ ಆಗಿರುವುದರಿಂದ ಇಲ್ಲಿನ ಆಡಳಿತಾತ್ಮಕ ಸೇವೆಗಳ ಮೇಲೆ ತಾನೇ ನಿಯಂತ್ರಣ ಹೊಂದುವ ಅಗತ್ಯವಿದೆ ಎಂದು ಬುಧವಾರ ನಡೆದ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಪ್ರತಿಪಾದಿಸಿತ್ತು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/tmc-mp-mahua-moitra-complaint-decathlon-mobile-number-for-trousers-purchase-violating-privacy-laws-932237.html" itemprop="url">ಪ್ಯಾಂಟ್ ಖರೀದಿಗೂ ಮೊಬೈಲ್ ಸಂಖ್ಯೆ; ಡೆಕಾಥ್ಲಾನ್ ವಿರುದ್ಧ ಸಂಸದೆ ಮಹುವಾ ಕಿಡಿ </a></p>.<p>ದೆಹಲಿ ಸರ್ಕಾರವು ಶಾಸಕಾಂಗ ಸಭೆ ಅಥವಾ ಮಂತ್ರಿಮಂಡಳವನ್ನು ಹೊಂದಿದ್ದರೂ ಕೇಂದ್ರ ಸರ್ಕಾರ ಪ್ರಮುಖ ಪಾತ್ರ ನಿರ್ವಹಿಸುವ ಅಗತ್ಯವಿದೆ ಎಂದೂ ಕೇಂದ್ರ ವಾದಿಸಿತ್ತು. ಇದಕ್ಕೆ ದೆಹಲಿ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>