ರಮಣಿ ಅವರನ್ನು ಪ್ರತಿನಿಧಿಸಿದ್ದ ವಕೀಲ ಭವೂಕ್ ಚೌಹಾಣ್ ಅವರು, ಪ್ರತಿಕ್ರಿಯೆಯನ್ನು ದಾಖಲಿಸಲು ಸಮಯ ಕೇಳಿದರು. ಅಕ್ಬರ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ರಾಜೀವ್ ನಾಯರ್ ಅವರು, ತಾವು ಈ ಪ್ರಕರಣದಲ್ಲಿ ಯಾವುದೇ ಮಧ್ಯಂತರ ಆದೇಶ ನೀಡುವಂತೆ ಕೋರುತ್ತಿಲ್ಲ ಎಂದು ಹೇಳಿದರು. ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಹಕ್ಕಿದೆ. ಹೀಗಾಗಿ, ಅರ್ಜಿ ಮಾನ್ಯ ಮಾಡಲಾಗಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದರು.