<p><strong>ನವದೆಹಲಿ:</strong> ‘ಅತ್ಯಾಚಾರ ಸಂತ್ರಸ್ತೆಯ ಮೇಲೆ ತಾಯ್ತನದ ಹೊಣೆ ಹೇರುವುದು ಸಲ್ಲ. ಹಾಗೆ ಮಾಡುವುದರಿಂದ ಘನತೆಯಿಂದ ಬದುಕುವ ಆಕೆಯ ಹಕ್ಕನ್ನು ನಿರಾಕರಿಸಿದಂತಾಗುತ್ತದೆ’ ಎಂದು ದೆಹಲಿ ಹೈಕೋರ್ಟ್ ಗುರುವಾರ ಹೇಳಿದೆ.</p>.<p>ಅತ್ಯಾಚಾರಕ್ಕೊಳಗಾದ ನಂತರ ಗರ್ಭ ಧರಿಸಿದ್ದ 14 ವರ್ಷದ ಬಾಲಕಿಯೊಬ್ಬಳು 25 ವಾರಗಳ ಭ್ರೂಣ ತೆಗೆಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಸಂಬಂಧ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದೆ.</p>.<p>‘ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಮಗುವಿಗೆ ಜನ್ಮ ನೀಡುವಂತೆ ಸಂತ್ರಸ್ತೆಯನ್ನು ಬಲವಂತಪಡಿಸುವುದರಿಂದ ಆಕೆ ಅನುಭವಿಸಲಿರುವ ಸಂಕಟಗಳು ವಿವರಿಸಲಾರದಂತಹವು. ತನ್ನ ಜೀವನದ ಆ ಕರಾಳ ಘಟನೆಯ ನೆನಪುಗಳು ಪ್ರತಿ ದಿನವೂ ಆಕೆಯನ್ನು ಕಾಡಲಿದ್ದು, ಆ ಕೊರಗಲ್ಲೇ ಆಕೆ ನರಳಬೇಕಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.</p>.<p>ಸಂತ್ರಸ್ತೆಯ ಪೋಷಕರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಆಕೆಯ ತಾಯಿ ಕೆಲಸದ ನಿಮಿತ್ತ ಮನೆಯಿಂದ ಹೊರ ಹೋಗಿದ್ದಾಗ ಆರೋಪಿಯು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ತೆ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ಅತ್ಯಾಚಾರ ಸಂತ್ರಸ್ತೆಯರನ್ನು ಪರೀಕ್ಷೆಗೆ ಒಳಪಡಿಸುವಾಗ ಅವರು ಗರ್ಭ ಧರಿಸಿದ್ದಾರೊ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದಕ್ಕಾಗಿ ಬಹುತೇಕ ಸಂದರ್ಭಗಳಲ್ಲಿ ತನಿಖಾಧಿಕಾರಿಗಳು ಆಕೆಯ ಮೂತ್ರದ ಪರೀಕ್ಷೆ ನಡೆಸುವುದೇ ಇಲ್ಲ. ಇನ್ನು ಮುಂದೆ ಈ ಪರೀಕ್ಷೆಯನ್ನು ಕಡ್ಡಾಯವಾಗಿ ಕೈಗೊಳ್ಳಬೇಕು’ ಎಂದು ನ್ಯಾಯಪೀಠವು ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಅತ್ಯಾಚಾರ ಸಂತ್ರಸ್ತೆಯ ಮೇಲೆ ತಾಯ್ತನದ ಹೊಣೆ ಹೇರುವುದು ಸಲ್ಲ. ಹಾಗೆ ಮಾಡುವುದರಿಂದ ಘನತೆಯಿಂದ ಬದುಕುವ ಆಕೆಯ ಹಕ್ಕನ್ನು ನಿರಾಕರಿಸಿದಂತಾಗುತ್ತದೆ’ ಎಂದು ದೆಹಲಿ ಹೈಕೋರ್ಟ್ ಗುರುವಾರ ಹೇಳಿದೆ.</p>.<p>ಅತ್ಯಾಚಾರಕ್ಕೊಳಗಾದ ನಂತರ ಗರ್ಭ ಧರಿಸಿದ್ದ 14 ವರ್ಷದ ಬಾಲಕಿಯೊಬ್ಬಳು 25 ವಾರಗಳ ಭ್ರೂಣ ತೆಗೆಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಸಂಬಂಧ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದೆ.</p>.<p>‘ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಮಗುವಿಗೆ ಜನ್ಮ ನೀಡುವಂತೆ ಸಂತ್ರಸ್ತೆಯನ್ನು ಬಲವಂತಪಡಿಸುವುದರಿಂದ ಆಕೆ ಅನುಭವಿಸಲಿರುವ ಸಂಕಟಗಳು ವಿವರಿಸಲಾರದಂತಹವು. ತನ್ನ ಜೀವನದ ಆ ಕರಾಳ ಘಟನೆಯ ನೆನಪುಗಳು ಪ್ರತಿ ದಿನವೂ ಆಕೆಯನ್ನು ಕಾಡಲಿದ್ದು, ಆ ಕೊರಗಲ್ಲೇ ಆಕೆ ನರಳಬೇಕಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.</p>.<p>ಸಂತ್ರಸ್ತೆಯ ಪೋಷಕರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಆಕೆಯ ತಾಯಿ ಕೆಲಸದ ನಿಮಿತ್ತ ಮನೆಯಿಂದ ಹೊರ ಹೋಗಿದ್ದಾಗ ಆರೋಪಿಯು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ತೆ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ಅತ್ಯಾಚಾರ ಸಂತ್ರಸ್ತೆಯರನ್ನು ಪರೀಕ್ಷೆಗೆ ಒಳಪಡಿಸುವಾಗ ಅವರು ಗರ್ಭ ಧರಿಸಿದ್ದಾರೊ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದಕ್ಕಾಗಿ ಬಹುತೇಕ ಸಂದರ್ಭಗಳಲ್ಲಿ ತನಿಖಾಧಿಕಾರಿಗಳು ಆಕೆಯ ಮೂತ್ರದ ಪರೀಕ್ಷೆ ನಡೆಸುವುದೇ ಇಲ್ಲ. ಇನ್ನು ಮುಂದೆ ಈ ಪರೀಕ್ಷೆಯನ್ನು ಕಡ್ಡಾಯವಾಗಿ ಕೈಗೊಳ್ಳಬೇಕು’ ಎಂದು ನ್ಯಾಯಪೀಠವು ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>