<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿಯ ವಿವಿಧ ಮಾರುಕಟ್ಟೆಗಳಲ್ಲಿ ‘ಕೋವಿಡ್ 19‘ ಮಾರ್ಗಸೂಚಿ ಉಲ್ಲಂಘನೆ ಯಾಗುತ್ತಿರುವ ಕುರಿತು ಉಲ್ಲೇಖಿಸಿರುವ ದೆಹಲಿ ಹೈಕೋರ್ಟ್, ‘ಕೋವಿಡ್–19‘ ಮೂರನೇ ಅಲೆಯನ್ನು ಉತ್ತೇಜಿಸಲು ಕಾರಣವಾಗುವಂತಹ ಇಂಥ ನಿಯಮ ಉಲ್ಲಂಘನೆ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಹೇಳಿದೆ.</p>.<p>ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ಕೋವಿಡ್ – 19 ಮಾರ್ಗಸೂಚಿ ಪಾಲಿಸದಿರುವಂತಹ ದೃಶ್ಯಗಳಿರುವ ಛಾಯಾಚಿತ್ರಗಳನ್ನು ಏಮ್ಸ್ನ ವೈದ್ಯರೊಬ್ಬರು ಹೈಕೋರ್ಟ್ನ ನ್ಯಾಯಮೂರ್ತಿಯೊಬ್ಬರಿಗೆ ಕಳುಹಿಸಿದ್ದರು. ಆ ಫೋಟೊಗಳನ್ನು ಆಧರಿಸಿ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಆಶಾ ಮೆನನ್ ಅವರನ್ನೊಳಗೊಂಡ ರಜಾಕಾಲದ ಪೀಠ ಈ ರೀತಿ ಸೂಚನೆ ನೀಡಿದೆ.</p>.<p><strong>ಓದಿ:</strong><a href="https://www.prajavani.net/india-news/covid-19-india-update-new-coronavirus-cases-on-18th-june-2021-839940.html" itemprop="url">Covid-19 India Update: ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ ಇಳಿಕೆ</a></p>.<p>ಇದೇ ವೇಳೆ, ನ್ಯಾಯಾಲಯ ಮಾರುಕಟ್ಟೆ ಸ್ಥಳಗಳಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ, ಅಂಗಡಿ ಮಾಲೀಕರಿಗೆ ಅರಿವು ಮೂಡಿಸುವ ಸಂಬಂಧ ಮಾರಾಟಗಾರ ಸಂಘಗಳು ಮತ್ತು ಅಂಗಡಿಗಳ ಮಾಲೀಕರ ಒಕ್ಕೂಟದಾರರೊಂದಿಗೆ ಸಭೆ ನಡೆಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿಯ ವಿವಿಧ ಮಾರುಕಟ್ಟೆಗಳಲ್ಲಿ ‘ಕೋವಿಡ್ 19‘ ಮಾರ್ಗಸೂಚಿ ಉಲ್ಲಂಘನೆ ಯಾಗುತ್ತಿರುವ ಕುರಿತು ಉಲ್ಲೇಖಿಸಿರುವ ದೆಹಲಿ ಹೈಕೋರ್ಟ್, ‘ಕೋವಿಡ್–19‘ ಮೂರನೇ ಅಲೆಯನ್ನು ಉತ್ತೇಜಿಸಲು ಕಾರಣವಾಗುವಂತಹ ಇಂಥ ನಿಯಮ ಉಲ್ಲಂಘನೆ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಹೇಳಿದೆ.</p>.<p>ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ಕೋವಿಡ್ – 19 ಮಾರ್ಗಸೂಚಿ ಪಾಲಿಸದಿರುವಂತಹ ದೃಶ್ಯಗಳಿರುವ ಛಾಯಾಚಿತ್ರಗಳನ್ನು ಏಮ್ಸ್ನ ವೈದ್ಯರೊಬ್ಬರು ಹೈಕೋರ್ಟ್ನ ನ್ಯಾಯಮೂರ್ತಿಯೊಬ್ಬರಿಗೆ ಕಳುಹಿಸಿದ್ದರು. ಆ ಫೋಟೊಗಳನ್ನು ಆಧರಿಸಿ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಆಶಾ ಮೆನನ್ ಅವರನ್ನೊಳಗೊಂಡ ರಜಾಕಾಲದ ಪೀಠ ಈ ರೀತಿ ಸೂಚನೆ ನೀಡಿದೆ.</p>.<p><strong>ಓದಿ:</strong><a href="https://www.prajavani.net/india-news/covid-19-india-update-new-coronavirus-cases-on-18th-june-2021-839940.html" itemprop="url">Covid-19 India Update: ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ ಇಳಿಕೆ</a></p>.<p>ಇದೇ ವೇಳೆ, ನ್ಯಾಯಾಲಯ ಮಾರುಕಟ್ಟೆ ಸ್ಥಳಗಳಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ, ಅಂಗಡಿ ಮಾಲೀಕರಿಗೆ ಅರಿವು ಮೂಡಿಸುವ ಸಂಬಂಧ ಮಾರಾಟಗಾರ ಸಂಘಗಳು ಮತ್ತು ಅಂಗಡಿಗಳ ಮಾಲೀಕರ ಒಕ್ಕೂಟದಾರರೊಂದಿಗೆ ಸಭೆ ನಡೆಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>