<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ಮರಗಳನ್ನು ಕಡಿಯುವುದಕ್ಕೆ ಗುರುವಾರ ತಡೆ ನೀಡಿರುವ ದೆಹಲಿ ಹೈಕೋರ್ಟ್, ನಗರದ ಹಸಿರು ಪರಿಸರ ಸಂರಕ್ಷಣೆ ಹಿನ್ನೆಲೆಯಲ್ಲಿ ಈ ರೀತಿಯ ಕ್ರಮ ಕೈಗೊಳ್ಳದೇ ಬೇರೆ ಮಾರ್ಗವಿಲ್ಲ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಕಳೆದ 3 ವರ್ಷಗಳ ಅವಧಿಯಲ್ಲಿ ನಗರದಾದ್ಯಂತ 29,000ಕ್ಕೂ ಅಧಿಕ ಮರಗಳನ್ನು ನೆಲಕ್ಕುರುಳಿಸಲಾಗಿದ್ದು, ಇಷ್ಟೊಂದು ಸಂಖ್ಯೆಯ ಮರಗಳನ್ನು ಕಡಿಯುವ ಅಗತ್ಯ ಇತ್ತೇ?’ ಎಂದು ಮರಗಳ ಸಂರಕ್ಷಣೆಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಜ್ಮಿ ವಜೀರಿ ಪ್ರಶ್ನಿಸಿದ್ದಾರೆ.</p>.<p>‘ಮರಗಳನ್ನು ಕಡಿಯುವುದಕ್ಕೆ ನಾವು ತಡೆ ನೀಡಿದ್ದೇವೆ. ಈ ಪ್ರಕರಣದ ವಿಸ್ತೃತ ವಿಚಾರಣೆ ಜೂನ್ 2ರಂದು ನಡೆಯಲಿದೆ. ಅಲ್ಲಿಯವರೆಗೂ ಮರಗಳನ್ನು ಕಡಿಯಕೂಡದು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p>‘3 ವರ್ಷಗಳಲ್ಲಿ ಒಟ್ಟು 29,946 ಮರಗಳನ್ನು ಕಡಿಯಲು ಅನುಮತಿ ನೀಡಲಾಗಿದೆ. ದಿನವೊಂದಕ್ಕೆ ಸರಾಸರಿ 27 ಮರಗಳಿಗೆ ಕೊಡಲಿ ಏಟು ಬಿದ್ದಿದೆ’ ಎಂದು ನ್ಯಾಯಪೀಠ ಆತಂಕ ವ್ಯಕ್ತಪಡಿಸಿದೆ.</p>.<p>ಪೂರ್ಣ ಬೆಳೆದು ನಿಂತ ಮರಗಳನ್ನು ಕಡಿಯುವುದರಿಂದ ನಗರದ ಪರಿಸರ ಸಮತೋಲನ ಇನ್ನಷ್ಟು ಹದಗೆಡುತ್ತದೆ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ತುರ್ತಾಗಿ ವಾಯು ಮಾಲಿನ್ಯವನ್ನು ತಗ್ಗಿಸಬೇಕಾಗಿದೆ ಎಂದು ಪೀಠ ಹೇಳಿದೆ.</p>.<p>ಸಂಪೂರ್ಣ ಬೆಳೆದ ಮರಗಳನ್ನು ಕಡಿಯುವುದರ ಕುರಿತು ನ್ಯಾಯಾಲಯ ಕಳೆದ ತಿಂಗಳು ಕಳವಳ ವ್ಯಕ್ತಪಡಿಸಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ಮರಗಳನ್ನು ಕಡಿಯುವುದಕ್ಕೆ ಗುರುವಾರ ತಡೆ ನೀಡಿರುವ ದೆಹಲಿ ಹೈಕೋರ್ಟ್, ನಗರದ ಹಸಿರು ಪರಿಸರ ಸಂರಕ್ಷಣೆ ಹಿನ್ನೆಲೆಯಲ್ಲಿ ಈ ರೀತಿಯ ಕ್ರಮ ಕೈಗೊಳ್ಳದೇ ಬೇರೆ ಮಾರ್ಗವಿಲ್ಲ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಕಳೆದ 3 ವರ್ಷಗಳ ಅವಧಿಯಲ್ಲಿ ನಗರದಾದ್ಯಂತ 29,000ಕ್ಕೂ ಅಧಿಕ ಮರಗಳನ್ನು ನೆಲಕ್ಕುರುಳಿಸಲಾಗಿದ್ದು, ಇಷ್ಟೊಂದು ಸಂಖ್ಯೆಯ ಮರಗಳನ್ನು ಕಡಿಯುವ ಅಗತ್ಯ ಇತ್ತೇ?’ ಎಂದು ಮರಗಳ ಸಂರಕ್ಷಣೆಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಜ್ಮಿ ವಜೀರಿ ಪ್ರಶ್ನಿಸಿದ್ದಾರೆ.</p>.<p>‘ಮರಗಳನ್ನು ಕಡಿಯುವುದಕ್ಕೆ ನಾವು ತಡೆ ನೀಡಿದ್ದೇವೆ. ಈ ಪ್ರಕರಣದ ವಿಸ್ತೃತ ವಿಚಾರಣೆ ಜೂನ್ 2ರಂದು ನಡೆಯಲಿದೆ. ಅಲ್ಲಿಯವರೆಗೂ ಮರಗಳನ್ನು ಕಡಿಯಕೂಡದು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p>‘3 ವರ್ಷಗಳಲ್ಲಿ ಒಟ್ಟು 29,946 ಮರಗಳನ್ನು ಕಡಿಯಲು ಅನುಮತಿ ನೀಡಲಾಗಿದೆ. ದಿನವೊಂದಕ್ಕೆ ಸರಾಸರಿ 27 ಮರಗಳಿಗೆ ಕೊಡಲಿ ಏಟು ಬಿದ್ದಿದೆ’ ಎಂದು ನ್ಯಾಯಪೀಠ ಆತಂಕ ವ್ಯಕ್ತಪಡಿಸಿದೆ.</p>.<p>ಪೂರ್ಣ ಬೆಳೆದು ನಿಂತ ಮರಗಳನ್ನು ಕಡಿಯುವುದರಿಂದ ನಗರದ ಪರಿಸರ ಸಮತೋಲನ ಇನ್ನಷ್ಟು ಹದಗೆಡುತ್ತದೆ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ತುರ್ತಾಗಿ ವಾಯು ಮಾಲಿನ್ಯವನ್ನು ತಗ್ಗಿಸಬೇಕಾಗಿದೆ ಎಂದು ಪೀಠ ಹೇಳಿದೆ.</p>.<p>ಸಂಪೂರ್ಣ ಬೆಳೆದ ಮರಗಳನ್ನು ಕಡಿಯುವುದರ ಕುರಿತು ನ್ಯಾಯಾಲಯ ಕಳೆದ ತಿಂಗಳು ಕಳವಳ ವ್ಯಕ್ತಪಡಿಸಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>