<p><strong>ನವದೆಹಲಿ:</strong> ಅಧಿಕಾರ ದುರುಪಯೋಗ ಹಾಗೂ ಲಂಚ ಪಡೆದ ಆರೋಪಗಳನ್ನು ಎದುರಿಸುತ್ತಿದ್ದ ದೆಹಲಿ ನಗರಪಾಲಿಕೆಯ (ಎಂಸಿಡಿ) ಆರು ಜನ ಅಧಿಕಾರಿಗಳನ್ನು ಅಮಾನತುಗೊಳಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಅದೇಶಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p>ಸೂಪರಿಂಟೆಂಡೆಂಟ್ ಎಂಜಿನಿಯರ್ ಎ.ಎಸ್.ಯಾದವ್, ಆಡಳಿತಾಧಿಕಾರಿ ಮನೀಶ್ಕುಮಾರ್, ಡೆಪ್ಯುಟಿ ಕಂಟ್ರೋಲರ್ ಆಫ್ ಅಕೌಂಟ್ಸ್ ಅಂಜು ಭೂತಾನಿ, ಇನ್ಸ್ಪೆಕ್ಟರ್ (ದಕ್ಷಿಣ ವಲಯ) ವಿಜಯಕುಮಾರ್, ಕಿರಿಯ ಎಂಜಿನಿಯರ್ ಸಾಂಖ್ಯ ಮಿಶ್ರಾ ಹಾಗೂ ಸಹಾಯಕ ಎಂಜಿನಿಯರ್ ಶ್ರೀನಿವಾಸ ಅಮಾನತುಗೊಂಡವರು.</p>.<p><a href="https://www.prajavani.net/india-news/maharashtra-politics-uddhav-thackeray-slams-eknath-shinde-use-own-parents-photos-for-votes-957707.html" itemprop="url">ನನ್ನ ತಂದೆಯ ಭಾವಚಿತ್ರ ಬಳಸಿ ಮತಯಾಚನೆ ಮಾಡಬೇಡಿ: ಶಿಂದೆ ಬಣದ ವಿರುದ್ಧ ಠಾಕ್ರೆ ಗರಂ </a></p>.<p>ಕರೋಲ್ ಬಾಗ್ನಲ್ಲಿನ ಅನಧಿಕೃತ ನಿರ್ಮಾಣಗಳನ್ನು ಸಕ್ರಮಗೊಳಿಸಿದ ಆರೋಪ ಎದುರಿಸುತ್ತಿದ್ದ, ಆಸೀಫ್ ಅಲಿ ರಸ್ತೆ ಶಾಖೆಯ ಸಬ್ ರಜಿಸ್ಟ್ರಾರ್–3 ರಾಜ್ ಪಾಲ್ ವಿರುದ್ಧ ಸಿಬಿಐ ತನಿಖೆ ನಡೆಸಲು ಸಕ್ಸೇನಾ ಅವರು ಅನುಮತಿಯನ್ನು ನೀಡಿದ್ದಾರೆ ಎಂದೂ ಹೇಳಿದ್ದಾರೆ.</p>.<p>ಎಂಸಿಡಿ ಅಧಿಕಾರಿಗಳು, ದೆಹಲಿ ಸರ್ಕಾರ ಹಾಗೂ ದೆಹಲಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತ ದೂರುಗಳಿಗೆ ಸಂಬಂಧಿಸಿದಂತೆ, ಅಗತ್ಯಕ್ಕೆ ಅನುಗುಣವಾಗಿಯೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ಹೇಳಿವೆ.</p>.<p><a href="https://www.prajavani.net/india-news/parliment-monsoon-session-several-oppsition-mps-suspended-for-ruckus-in-rajya-sabha-957702.html" itemprop="url">ರಾಜ್ಯಸಭೆಯಲ್ಲಿ ತೀವ್ರ ಗದ್ದಲ: ಪ್ರತಿಪಕ್ಷಗಳ 19 ಸಂಸದರು ಅಮಾನತು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಧಿಕಾರ ದುರುಪಯೋಗ ಹಾಗೂ ಲಂಚ ಪಡೆದ ಆರೋಪಗಳನ್ನು ಎದುರಿಸುತ್ತಿದ್ದ ದೆಹಲಿ ನಗರಪಾಲಿಕೆಯ (ಎಂಸಿಡಿ) ಆರು ಜನ ಅಧಿಕಾರಿಗಳನ್ನು ಅಮಾನತುಗೊಳಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಅದೇಶಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p>ಸೂಪರಿಂಟೆಂಡೆಂಟ್ ಎಂಜಿನಿಯರ್ ಎ.ಎಸ್.ಯಾದವ್, ಆಡಳಿತಾಧಿಕಾರಿ ಮನೀಶ್ಕುಮಾರ್, ಡೆಪ್ಯುಟಿ ಕಂಟ್ರೋಲರ್ ಆಫ್ ಅಕೌಂಟ್ಸ್ ಅಂಜು ಭೂತಾನಿ, ಇನ್ಸ್ಪೆಕ್ಟರ್ (ದಕ್ಷಿಣ ವಲಯ) ವಿಜಯಕುಮಾರ್, ಕಿರಿಯ ಎಂಜಿನಿಯರ್ ಸಾಂಖ್ಯ ಮಿಶ್ರಾ ಹಾಗೂ ಸಹಾಯಕ ಎಂಜಿನಿಯರ್ ಶ್ರೀನಿವಾಸ ಅಮಾನತುಗೊಂಡವರು.</p>.<p><a href="https://www.prajavani.net/india-news/maharashtra-politics-uddhav-thackeray-slams-eknath-shinde-use-own-parents-photos-for-votes-957707.html" itemprop="url">ನನ್ನ ತಂದೆಯ ಭಾವಚಿತ್ರ ಬಳಸಿ ಮತಯಾಚನೆ ಮಾಡಬೇಡಿ: ಶಿಂದೆ ಬಣದ ವಿರುದ್ಧ ಠಾಕ್ರೆ ಗರಂ </a></p>.<p>ಕರೋಲ್ ಬಾಗ್ನಲ್ಲಿನ ಅನಧಿಕೃತ ನಿರ್ಮಾಣಗಳನ್ನು ಸಕ್ರಮಗೊಳಿಸಿದ ಆರೋಪ ಎದುರಿಸುತ್ತಿದ್ದ, ಆಸೀಫ್ ಅಲಿ ರಸ್ತೆ ಶಾಖೆಯ ಸಬ್ ರಜಿಸ್ಟ್ರಾರ್–3 ರಾಜ್ ಪಾಲ್ ವಿರುದ್ಧ ಸಿಬಿಐ ತನಿಖೆ ನಡೆಸಲು ಸಕ್ಸೇನಾ ಅವರು ಅನುಮತಿಯನ್ನು ನೀಡಿದ್ದಾರೆ ಎಂದೂ ಹೇಳಿದ್ದಾರೆ.</p>.<p>ಎಂಸಿಡಿ ಅಧಿಕಾರಿಗಳು, ದೆಹಲಿ ಸರ್ಕಾರ ಹಾಗೂ ದೆಹಲಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತ ದೂರುಗಳಿಗೆ ಸಂಬಂಧಿಸಿದಂತೆ, ಅಗತ್ಯಕ್ಕೆ ಅನುಗುಣವಾಗಿಯೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ಹೇಳಿವೆ.</p>.<p><a href="https://www.prajavani.net/india-news/parliment-monsoon-session-several-oppsition-mps-suspended-for-ruckus-in-rajya-sabha-957702.html" itemprop="url">ರಾಜ್ಯಸಭೆಯಲ್ಲಿ ತೀವ್ರ ಗದ್ದಲ: ಪ್ರತಿಪಕ್ಷಗಳ 19 ಸಂಸದರು ಅಮಾನತು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>