<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐನಿಂದ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನುಇಲ್ಲಿನ ವಿಶೇಷ ನ್ಯಾಯಾಲಯವು 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ವಿಶೇಷ ನ್ಯಾಯಮೂರ್ತಿ ಎಂ.ಕೆ ನಾಗಪಾಲ್ ಅವರು, ಸಿಸೋಡಿಯಾ ಅವರನ್ನು ಏಪ್ರಿಲ್ 15ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. </p>.<p>ಪ್ರಕರಣ ಸಂಬಂಧ ಸಿಬಿಐನಿಂದ ಬಂಧಿತರಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ಮಾರ್ಚ್ 9 ರಂದು ಬಂಧಿಸಿತ್ತು.</p>.<p>ವಿಚಾರಣೆ ವೇಳೆ, ತಮ್ಮ ಪತಿ ಅನಾರೋಗ್ಯ ಪೀಡಿತೆಯಾಗಿದ್ದು, ಅವರನ್ನು ನೋಡಿಕೊಳ್ಳಬೇಕಾಗಿದೆ. ಪುತ್ರ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಸಿಸೋಡಿಯಾ ಪರ ವಕೀಲರು ಮನವಿ ಮಾಡಿದರು. </p>.<p>ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಸಿಸೋಡಿಯಾ ಅವರು ಸರ್ಕಾರ ಉನ್ನತ ಸ್ಥಾನದಲ್ಲಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಇದೆ ಹೀಗಾಗಿ ಜಾಮೀನು ನೀಡಬಾರದು ಎಂದು ಆಗ್ರಹಿಸಿದರು.</p>.<p>ಸಿಸೋಡಿಯಾ ಅವರು ಸಿಬಿಐ ತನಿಖೆಗೆ ಸಹಕರಿಸುತ್ತಿದ್ದಾರೆ. ಆದರೆ ಅವರ ಪರವಾಗಿ ಯಾವ ಸಾಕ್ಷಿಯೂ ಸಿಕ್ಕಿಲ್ಲ. ಹೀಗಾಗಿ ಅವರ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಸಿಸೋಡಿಯಾ ಪರ ವಕೀಲರು ವಾದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐನಿಂದ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನುಇಲ್ಲಿನ ವಿಶೇಷ ನ್ಯಾಯಾಲಯವು 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ವಿಶೇಷ ನ್ಯಾಯಮೂರ್ತಿ ಎಂ.ಕೆ ನಾಗಪಾಲ್ ಅವರು, ಸಿಸೋಡಿಯಾ ಅವರನ್ನು ಏಪ್ರಿಲ್ 15ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. </p>.<p>ಪ್ರಕರಣ ಸಂಬಂಧ ಸಿಬಿಐನಿಂದ ಬಂಧಿತರಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ಮಾರ್ಚ್ 9 ರಂದು ಬಂಧಿಸಿತ್ತು.</p>.<p>ವಿಚಾರಣೆ ವೇಳೆ, ತಮ್ಮ ಪತಿ ಅನಾರೋಗ್ಯ ಪೀಡಿತೆಯಾಗಿದ್ದು, ಅವರನ್ನು ನೋಡಿಕೊಳ್ಳಬೇಕಾಗಿದೆ. ಪುತ್ರ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಸಿಸೋಡಿಯಾ ಪರ ವಕೀಲರು ಮನವಿ ಮಾಡಿದರು. </p>.<p>ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಸಿಸೋಡಿಯಾ ಅವರು ಸರ್ಕಾರ ಉನ್ನತ ಸ್ಥಾನದಲ್ಲಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಇದೆ ಹೀಗಾಗಿ ಜಾಮೀನು ನೀಡಬಾರದು ಎಂದು ಆಗ್ರಹಿಸಿದರು.</p>.<p>ಸಿಸೋಡಿಯಾ ಅವರು ಸಿಬಿಐ ತನಿಖೆಗೆ ಸಹಕರಿಸುತ್ತಿದ್ದಾರೆ. ಆದರೆ ಅವರ ಪರವಾಗಿ ಯಾವ ಸಾಕ್ಷಿಯೂ ಸಿಕ್ಕಿಲ್ಲ. ಹೀಗಾಗಿ ಅವರ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಸಿಸೋಡಿಯಾ ಪರ ವಕೀಲರು ವಾದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>