‘ಮಾಜಿ ಶಾಸಕ ಕಿಶೋರ್ ಸಮ್ರೀತೆ ಅವರನ್ನು ದೆಹಲಿ ಪೊಲೀಸ್ ಅಪರಾಧ ದಳ ಭೋಪಾಲದಲ್ಲಿ ಬಂಧಿಸಿದೆ. ಜಿಲೆಟಿನ್ ಕಡ್ಡಿಗಳು ಹಾಗೂ ರಾಷ್ಟ್ರ ಧ್ವಜ ಇದ್ದ ಪೊಟ್ಟಣವನ್ನು ಅವರು ಸಂಸತ್ ಭವನಕ್ಕೆ ಕಳುಹಿಸಿಕೊಟ್ಟಿದ್ದರು. ತಮ್ಮ ಬೇಡಿಕೆಗಳನ್ನು ಸೆಪ್ಟೆಂಬರ್ 30ರ ಒಳಗೆ ಈಡೇರಿಸದಿದ್ದರೆ ಸಂಸತ್ ಭವನವನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದರು. ಈ ಕುರಿತು ಪ್ರಕರಣ ದಾಖಲಿಸಲಾಗಿದೆ’ ಎಂದು ‘ಎಎನ್ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.