<p><strong>ನವದೆಹಲಿ:</strong> ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು (ಹರಿಯಾಣ–ದೆಹಲಿ) ಗಡಿ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪತ್ರಕರ್ತ ಮನದೀಪ್ ಪೂನಿಯಾ ಎನ್ನುವವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.</p>.<p>ಪೂನಿಯಾ ಅವರನ್ನುಶನಿವಾರ ರಾತ್ರಿ ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 186 (ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ) ಮತ್ತು ಸೆಕ್ಷನ್ 353 (ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಲಿಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<p>ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಬೇಕು ಎಂದು ಸ್ಥಳೀಯರು ಶುಕ್ರವಾರ ಒತ್ತಾಯಿಸಿದ್ದರು. ಈ ವೇಳೆ ರೈತರು ಮತ್ತು ಸ್ಥಳೀಯರ ನಡುವೆ ನಡೆದ ಘರ್ಷಣೆಯಲ್ಲಿ ಅಲಿಪುರ ಠಾಣಾಧಿಕಾರಿ ಪ್ರದೀಪ್ ಪಾಲಿವಾಲ್ ಗಾಯಗೊಂಡಿದ್ದರು.</p>.<p>ಸದ್ಯ ಸ್ಥಳದಲ್ಲಿ ಪ್ರತಿಭಟನೆ ಮುಂದುವರಿದಿದ್ದು ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಪ್ರತಿಭಟಿಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಾಯಕರು ಫೆಬ್ರುವರಿ 2ರಂದು ಸಭೆ ಸೇರಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು (ಹರಿಯಾಣ–ದೆಹಲಿ) ಗಡಿ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪತ್ರಕರ್ತ ಮನದೀಪ್ ಪೂನಿಯಾ ಎನ್ನುವವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.</p>.<p>ಪೂನಿಯಾ ಅವರನ್ನುಶನಿವಾರ ರಾತ್ರಿ ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 186 (ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ) ಮತ್ತು ಸೆಕ್ಷನ್ 353 (ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಲಿಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<p>ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಬೇಕು ಎಂದು ಸ್ಥಳೀಯರು ಶುಕ್ರವಾರ ಒತ್ತಾಯಿಸಿದ್ದರು. ಈ ವೇಳೆ ರೈತರು ಮತ್ತು ಸ್ಥಳೀಯರ ನಡುವೆ ನಡೆದ ಘರ್ಷಣೆಯಲ್ಲಿ ಅಲಿಪುರ ಠಾಣಾಧಿಕಾರಿ ಪ್ರದೀಪ್ ಪಾಲಿವಾಲ್ ಗಾಯಗೊಂಡಿದ್ದರು.</p>.<p>ಸದ್ಯ ಸ್ಥಳದಲ್ಲಿ ಪ್ರತಿಭಟನೆ ಮುಂದುವರಿದಿದ್ದು ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಪ್ರತಿಭಟಿಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಾಯಕರು ಫೆಬ್ರುವರಿ 2ರಂದು ಸಭೆ ಸೇರಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>