ದೆಹಲಿ ಪೊಲೀಸರ ಜೊತೆಗೆ ಹಲವು ಸುತ್ತಿನ ಮಾತುಕತೆಯ ಬಳಿಕ ಟ್ರ್ಯಾಕ್ಟರ್ ಪೆರೇಡ್ಗೆ ಸಂಯುಕ್ತ ಕಿಸಾನ್ ಮೋರ್ಚಾ ಆಹ್ವಾನ ನೀಡಿದ್ದವು. ಅಲ್ಲದೆ ಶಾಂತಿಯುತ ಪ್ರತಿಭಟನೆಗಾಗಿ ನಿರ್ದಿಷ್ಟ ಮಾರ್ಗ ಹಾಗೂ ಸಮಯ ನಿಗದಿಪಡಿಸಲಾಗಿತ್ತು. ಆದರೆ ಮಂಗಳವಾರ ಬೆಳಗ್ಗೆ 8.30ರ ವೇಳೆಗೆ ಗಡಿಯಲ್ಲಿ ಒಗ್ಗೂಡಿದ 6,000ದಿಂದ 7,000 ಟ್ರ್ಯಾಕ್ಟರ್ಗಳು ಪೂರ್ವ ನಿರ್ಧಾರಿತ ಮಾರ್ಗದಲ್ಲಿ ಹೋಗುವ ಬದಲು ರಾಷ್ಟ್ರ ರಾಜಧಾನಿಯತ್ತ ಪ್ರಯಾಣ ಬೆಳೆಸಿದರು. ಹಲವು ಬಾರಿ ಮನವಿ ಮಾಡಿದರೂ ರೈತರು ಅದನ್ನು ಲೆಕ್ಕಿಸದೆ ಬ್ಯಾರಿಕೇಡ್ಗಳನ್ನು ಮುರಿದು ಹಿಂಸಾಚಾರಕ್ಕೆ ತಿರುಗಿದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.