ಇತ್ತೀಚೆಗೆ ತೆಲಂಗಾಣದ ಐಟಿ ಮತ್ತು ಉದ್ಯಮ ಖಾತೆ ಸಚಿವ ಕೆ.ಟಿ. ರಾಮರಾವ್ ಅವರ ಆಹ್ವಾನದ ಮೇರೆಗೆ ಮುನವ್ವರ್ ಫಾರೂಕಿ ಹೈದರಾಬಾದ್ನಲ್ಲಿ ‘ಡೋಂಗ್ರಿ ಟು ನೋವೇರ್‘ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಮುನವ್ವರ್ ಕಾರ್ಯಕ್ರಮ ನಡೆಸಿದರೆ, ವೇದಿಕೆಗೆ ಬೆಂಕಿ ಹಚ್ಚುವುದಾಗಿಯೂ, ಫಾರೂಕ್ ಮೇಲೆ ಹಲ್ಲೆ ನಡೆಸುವುದಾಗಿಯೂ ಬಿಜೆಪಿ ಶಾಸಕ ರಾಜಾ ಸಿಂಗ್ ಬೆದರಿಕೆ ಒಡ್ಡಿದ್ದರು. ಬಳಿಕ ಬಿಗಿ ಭದ್ರತೆಯೊಂದಿಗೆ ಕಾರ್ಯಕ್ರಮ ನಡೆದಿತ್ತು.