ಪೊಲೀಸರ ಪ್ರಕಾರ, ಜ.26ರಂದು ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದ ಹಿಂದೆ ಸಿಧು ಪ್ರಮುಖ ಪಾತ್ರ ವಹಿಸಿದ್ದಾರೆ. ತಲೆ ಮರೆಸಿಕೊಂಡಿದ್ದ ಆರೋಪಿ ಸಿಧು ಅವರನ್ನು ಹರಿಯಾಣದ ಕರ್ನಲ್ ಬಳಿ ದೆಹಲಿ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದರು. ಮತ್ತೊಬ್ಬ ಪ್ರಮುಖ ಆರೋಪಿ ಇಕ್ಬಾಲ್ ಸಿಂಗ್ ಎಂಬಾತನನ್ನು ಮಂಗಳವಾರ ರಾತ್ರಿ ಪಂಜಾಬ್ನ ಹೋಸಿಯಾರ್ಪುರ ಬಳಿ ಬಂಧಿಸಲಾಗಿತ್ತು. ಇನ್ನೊಬ್ಬ ಆರೋಪಿ ಸುಖ್ದೇವ್ ಸಿಂಗ್ನನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಪೊಲೀಸರು ಶೋಧ ಮುಂದುವರಿಸಿದ್ದಾರೆ.