ನವದೆಹಲಿ: ‘ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಕಳೆದ ಎರಡು ವರ್ಷದಿಂದ ಜೈಲಿನಲ್ಲಿರುವ ಜೆಎನ್ಯುನ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ಜಾಮೀನು ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.
‘ಜಾಮೀನು ಅರ್ಜಿಯಲ್ಲಿ ಹುರುಳಿಲ್ಲ. ಆದ್ದರಿಂದ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದೆ’ ಎಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ರಜನೀಶ್ ಭಾಟ್ನಗರ್ ಹೇಳಿದರು.
ಮಾರ್ಚ್ 24ರಂದು ವಿಚಾರಣಾ ನ್ಯಾಯಾಲಯವು ಖಾಲಿದ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಈ ಕುರಿತು ದೆಹಲಿ ಹೈಕೋರ್ಟ್ಗೆ ಖಾಲಿದ್ ಮೇಲ್ಮನವಿ ಸಲ್ಲಿಸಿದ್ದರು.