ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂದೆಯ ಅಂತ್ಯಸಂಸ್ಕಾರ: ಜೆಎನ್‌ಯು ವಿದ್ಯಾರ್ಥಿನಿ ನತಾಶಾ ನರ್ವಾಲ್‌ಗೆ ಜಾಮೀನು

ಈಶಾನ್ಯ ದೆಹಲಿ ಗಲಭೆ ಪ್ರಕರಣದ ಆರೋಪಿ
Last Updated 10 ಮೇ 2021, 9:30 IST
ಅಕ್ಷರ ಗಾತ್ರ

ನವದೆಹಲಿ: ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜೆಎನ್‌ಯು ವಿದ್ಯಾರ್ಥಿನಿ ನತಾಶಾ ನರ್ವಾಲ್‌ ತಂದೆ ಕೋವಿಡ್‌ನಿಂದ ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ನತಾಶಾಗೆ ದೆಹಲಿ ಹೈಕೋರ್ಟ್‌ ಸೋಮವಾರ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಸಿದ್ದಾರ್ಥ್‌ ಮೃದುಲ್‌ ಮತ್ತು ಎ.ಜೆ. ಭಂಭಾನಿ ಅವರ ಪೀಠವು ನತಾಶಾ ನರ್ವಾಲ್‌ರಿಂದ ₹50,000 ವೈಯಕ್ತಿಕ ಬಾಂಡ್‌ ಬರೆಸಿಕೊಂಡು ಮೂರು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ನತಾಶಾ ಅಣ್ಣನಿಗೂ ಸೋಂಕು ತಗುಲಿದೆ. ಅಲ್ಲದೆ ಸರ್ಕಾರವು ಈ ಜಾರ್ಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸದ ಕಾರಣ ನತಾಶಾಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT