ಕಳೆದ ವರ್ಷ ಸೆಪ್ಟೆಂಬರ್ 24ರಂದು, ವಕೀಲರ ವೇಷ ತೊಟ್ಟು ಕೋರ್ಟ್ ಆವರಣ ಪ್ರವೇಶಿಸಿದ್ದ ಸುನೀಲ್ ಟಿಲ್ಲು ಗ್ಯಾಂಗ್ನ ಇಬ್ಬರು ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಜಿತೇಂದರ್ ಗೋಗಿ ಎಂಬುವವರು ಮೃತಪಟ್ಟಿದ್ದರು. ಟಿಲ್ಲು ಗ್ಯಾಂಗ್ನ ಎದುರಾಳಿಯಾಗಿದ್ದ ಜಿತೇಂದರ್ ಹತ್ಯೆಗೆ ಬಂಧಿತ ಆರೋಪಿ ರಾಕೇಶ್ ಸಂಚು ರೂಪಿಸಿದ್ದ. ಸುನೀಲ್ ಸೂಚನೆಯಂತೆ ಶೂಟರ್ಗಳು ಹಾಗೂ ಶಸ್ತ್ರಾಸ್ತ್ರಗಳ ವ್ಯವಸ್ಥೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.