<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿ ಶೀಘ್ರದಲ್ಲೇ ಕೆರೆಗಳ ನಗರವಾಗಲಿದ್ದು, ಪ್ರವಾಸಿ ತಾಣವಾಗಿ ಮಾರ್ಪಡಲಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.</p>.<p>ಕೆರೆಗಳ ಪುನರುಜ್ಜೀವನ ಕುರಿತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರ ಟ್ವೀಟ್ ಅನ್ನು ಟ್ಯಾಗ್ ಮಾಡಿರುವ ಕೇಜ್ರಿವಾಲ್, ‘ದೆಹಲಿ ಶೀಘ್ರದಲ್ಲೇ ಕೆರೆಗಳ ನಗರವಾಗಲಿದೆ’ ಎಂದು ತಿಳಿಸಿದ್ದಾರೆ.</p>.<p>ದೆಹಲಿಯಾದ್ಯಂತ ನಾವು ಹಲವಾರು ಸುಂದರವಾದ ಕೆರೆಗಳನ್ನು ಹೊಂದಲಿದ್ದೇವೆ. ಅವು ಸ್ಥಳೀಯ ಜನರಿಗೆ ರಿಫ್ರೆಶ್ ತಾಣಗಳಾಗಿ ಕಾರ್ಯನಿರ್ವಹಿಸುತ್ತವೆ. ಹೊರಗಿನವರಿಗೆ ಪ್ರವಾಸಿ ತಾಣಗಳಾಗಿ ಮಾರ್ಪಡಲಿವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>.<p>ವಾಯವ್ಯ ದೆಹಲಿಯ ಬವಾನಾದಲ್ಲಿರುವ ಸನ್ನೋತ್ ಕೆರೆಯ ಕಾಮಗಾರಿ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ‘ರಾಜಧಾನಿಯಲ್ಲಿ 50 ಕೆರೆಗಳ ಪುನರುಜ್ಜೀವನ ಮತ್ತು ಸೌಂದರ್ಯೀಕರಣವನ್ನು ಸರ್ಕಾರ ಕೈಗೊಳ್ಳುತ್ತಿದೆ’ ಎಂದು ಟ್ವೀಟಿಸಿದ್ದಾರೆ.</p>.<p>ಸನ್ನೋತ್ ಕೆರೆಯು ಆರು ಎಕರೆಯಲ್ಲಿ ಹರಡಿಕೊಂಡಿದ್ದು, ಮಕ್ಕಳಿಗಾಗಿ ಆಟದ ಮೈದಾನ, ಪಿಕ್ನಿಕ್ ಉದ್ಯಾನ, ವಾಕ್ ವೇ, ಛತ್ ಪೂಜಾ ಘಾಟ್ ಮತ್ತು ಸಾರ್ವಜನಿಕರಿಗೆ ಜಿಮ್ ಮುಂತಾದ ಸೌಲಭ್ಯಗಳನ್ನು ಹೊಂದಿರಲಿದೆ ಎಂದು ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿ ಶೀಘ್ರದಲ್ಲೇ ಕೆರೆಗಳ ನಗರವಾಗಲಿದ್ದು, ಪ್ರವಾಸಿ ತಾಣವಾಗಿ ಮಾರ್ಪಡಲಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.</p>.<p>ಕೆರೆಗಳ ಪುನರುಜ್ಜೀವನ ಕುರಿತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರ ಟ್ವೀಟ್ ಅನ್ನು ಟ್ಯಾಗ್ ಮಾಡಿರುವ ಕೇಜ್ರಿವಾಲ್, ‘ದೆಹಲಿ ಶೀಘ್ರದಲ್ಲೇ ಕೆರೆಗಳ ನಗರವಾಗಲಿದೆ’ ಎಂದು ತಿಳಿಸಿದ್ದಾರೆ.</p>.<p>ದೆಹಲಿಯಾದ್ಯಂತ ನಾವು ಹಲವಾರು ಸುಂದರವಾದ ಕೆರೆಗಳನ್ನು ಹೊಂದಲಿದ್ದೇವೆ. ಅವು ಸ್ಥಳೀಯ ಜನರಿಗೆ ರಿಫ್ರೆಶ್ ತಾಣಗಳಾಗಿ ಕಾರ್ಯನಿರ್ವಹಿಸುತ್ತವೆ. ಹೊರಗಿನವರಿಗೆ ಪ್ರವಾಸಿ ತಾಣಗಳಾಗಿ ಮಾರ್ಪಡಲಿವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>.<p>ವಾಯವ್ಯ ದೆಹಲಿಯ ಬವಾನಾದಲ್ಲಿರುವ ಸನ್ನೋತ್ ಕೆರೆಯ ಕಾಮಗಾರಿ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ‘ರಾಜಧಾನಿಯಲ್ಲಿ 50 ಕೆರೆಗಳ ಪುನರುಜ್ಜೀವನ ಮತ್ತು ಸೌಂದರ್ಯೀಕರಣವನ್ನು ಸರ್ಕಾರ ಕೈಗೊಳ್ಳುತ್ತಿದೆ’ ಎಂದು ಟ್ವೀಟಿಸಿದ್ದಾರೆ.</p>.<p>ಸನ್ನೋತ್ ಕೆರೆಯು ಆರು ಎಕರೆಯಲ್ಲಿ ಹರಡಿಕೊಂಡಿದ್ದು, ಮಕ್ಕಳಿಗಾಗಿ ಆಟದ ಮೈದಾನ, ಪಿಕ್ನಿಕ್ ಉದ್ಯಾನ, ವಾಕ್ ವೇ, ಛತ್ ಪೂಜಾ ಘಾಟ್ ಮತ್ತು ಸಾರ್ವಜನಿಕರಿಗೆ ಜಿಮ್ ಮುಂತಾದ ಸೌಲಭ್ಯಗಳನ್ನು ಹೊಂದಿರಲಿದೆ ಎಂದು ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>