<p><strong>ನವದೆಹಲಿ: </strong>ಕೋವಿಡ್–19ನ ಸಂಭಾವ್ಯ ಮೂರನೇ ಅಲೆಯನ್ನು ಎದುರಿಸುವ ಸಲುವಾಗಿ ದೆಹಲಿಯಲ್ಲಿ ಮಕ್ಕಳ ವೈದ್ಯಕೀಯ ಕಾರ್ಯಪಡೆ (ಪಿಡಿಯಾಟ್ರಿಕ್ ಟಾಸ್ಕ್ ಫೋರ್ಸ್) ಸ್ಥಾಪನೆ ಸೇರಿದಂತೆ ಹಲವಾರು ಕ್ರಮಗಳನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ಘೋಷಿಸಿದ್ದಾರೆ.</p>.<p>ಕೊರೊನಾ ವೈರಸ್ ತಳಿಗಳ ವಿಶ್ಲೇಷಣೆಗಾಗಿ ಎರಡು ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಹಾಗೂ ನಿರಂತರ ಆಮ್ಲಜನಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಸಂಭಾವ್ಯ ಮೂರನೇ ಅಲೆಯಲ್ಲಿ ದಿನದಲ್ಲಿ ಗರಿಷ್ಠ 37,000 ಕೋವಿಡ್ ಪ್ರಕರಣಗಳು ವರದಿಯಾಗಬಹುದು ಎಂದು ತಜ್ಞರು ಹೇಳಿದ್ದಾರೆ.</p>.<p>‘ಮೂರನೇ ಅಲೆ ಸಂದರ್ಭದಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಂಗ್ರಹಿಸಲಾಗುವುದು. ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆ ಹಾಗೂ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆ್ಯಂಡ್ ಬೈಲರಿ ಸೈನ್ಸಸ್ (ಐಎಲ್ಬಿಎಸ್)ನಲ್ಲಿ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.</p>.<p>‘ನಗರದ ಜನತೆಯನ್ನು ಬಾಧಿಸಬಹುದಾದ ಕೊರೊನಾ ವೈರಸ್ನ ತಳಿಗಳನ್ನು ಪತ್ತೆ ಹಚ್ಚಲು ಈ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದರು.</p>.<p>‘ಎರಡನೇ ಅಲೆ ಸಂದರ್ಭದಲ್ಲಿ ಒಂದು ದಿನದಲ್ಲಿ ಗರಿಷ್ಠ 28,000 ಪ್ರಕರಣಗಳು ವರದಿಯಾಗಿದ್ದವು. ಮೂರನೇ ಅಲೆಯಲ್ಲಿ ಪ್ರಕರಣಗಳ ಗರಿಷ್ಠ ಸಂಖ್ಯೆ 37,000 ತಲುಪಬಹುದು ಎನ್ನಲಾಗುತ್ತಿದೆ. ಇಷ್ಟೊಂದು ಸಂಖ್ಯೆಯ ಪ್ರಕರಣಗಳು ವರದಿಯಾದರೂ, ಎದುರಿಸಲು ಸರ್ಕಾರ ಸಿದ್ಧವಾಗಿರಲಿದೆ’ ಎಂದು ಹೇಳಿದರು.</p>.<p>ಸಂಭಾವ್ಯ ಮೂರನೇ ಅಲೆ ಎದುರಿಸುವ ಸಲುವಾಗಿ ಯೋಜನೆ ರೂಪಿಸಲು ಕೇಜ್ರಿವಾಲ್ ಅವರು ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಶುಕ್ರವಾರ ಆರು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್–19ನ ಸಂಭಾವ್ಯ ಮೂರನೇ ಅಲೆಯನ್ನು ಎದುರಿಸುವ ಸಲುವಾಗಿ ದೆಹಲಿಯಲ್ಲಿ ಮಕ್ಕಳ ವೈದ್ಯಕೀಯ ಕಾರ್ಯಪಡೆ (ಪಿಡಿಯಾಟ್ರಿಕ್ ಟಾಸ್ಕ್ ಫೋರ್ಸ್) ಸ್ಥಾಪನೆ ಸೇರಿದಂತೆ ಹಲವಾರು ಕ್ರಮಗಳನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ಘೋಷಿಸಿದ್ದಾರೆ.</p>.<p>ಕೊರೊನಾ ವೈರಸ್ ತಳಿಗಳ ವಿಶ್ಲೇಷಣೆಗಾಗಿ ಎರಡು ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಹಾಗೂ ನಿರಂತರ ಆಮ್ಲಜನಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಸಂಭಾವ್ಯ ಮೂರನೇ ಅಲೆಯಲ್ಲಿ ದಿನದಲ್ಲಿ ಗರಿಷ್ಠ 37,000 ಕೋವಿಡ್ ಪ್ರಕರಣಗಳು ವರದಿಯಾಗಬಹುದು ಎಂದು ತಜ್ಞರು ಹೇಳಿದ್ದಾರೆ.</p>.<p>‘ಮೂರನೇ ಅಲೆ ಸಂದರ್ಭದಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಂಗ್ರಹಿಸಲಾಗುವುದು. ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆ ಹಾಗೂ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆ್ಯಂಡ್ ಬೈಲರಿ ಸೈನ್ಸಸ್ (ಐಎಲ್ಬಿಎಸ್)ನಲ್ಲಿ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.</p>.<p>‘ನಗರದ ಜನತೆಯನ್ನು ಬಾಧಿಸಬಹುದಾದ ಕೊರೊನಾ ವೈರಸ್ನ ತಳಿಗಳನ್ನು ಪತ್ತೆ ಹಚ್ಚಲು ಈ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದರು.</p>.<p>‘ಎರಡನೇ ಅಲೆ ಸಂದರ್ಭದಲ್ಲಿ ಒಂದು ದಿನದಲ್ಲಿ ಗರಿಷ್ಠ 28,000 ಪ್ರಕರಣಗಳು ವರದಿಯಾಗಿದ್ದವು. ಮೂರನೇ ಅಲೆಯಲ್ಲಿ ಪ್ರಕರಣಗಳ ಗರಿಷ್ಠ ಸಂಖ್ಯೆ 37,000 ತಲುಪಬಹುದು ಎನ್ನಲಾಗುತ್ತಿದೆ. ಇಷ್ಟೊಂದು ಸಂಖ್ಯೆಯ ಪ್ರಕರಣಗಳು ವರದಿಯಾದರೂ, ಎದುರಿಸಲು ಸರ್ಕಾರ ಸಿದ್ಧವಾಗಿರಲಿದೆ’ ಎಂದು ಹೇಳಿದರು.</p>.<p>ಸಂಭಾವ್ಯ ಮೂರನೇ ಅಲೆ ಎದುರಿಸುವ ಸಲುವಾಗಿ ಯೋಜನೆ ರೂಪಿಸಲು ಕೇಜ್ರಿವಾಲ್ ಅವರು ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಶುಕ್ರವಾರ ಆರು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>