ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಜನವರಿ 26 ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಪೆರೇಡ್ ಹಮ್ಮಿಕೊಂಡಿದ್ದರು. ಪೊಲೀಸರು ನಿಗದಿಪಡಿಸಿದ ಮಾರ್ಗವನ್ನು ಉಲ್ಲಂಘಿಸಿ ರಾಷ್ಟ್ರ ರಾಜಧಾನಿಗೆ ಪ್ರವೇಶಿಸಿದ್ದ ಪ್ರತಿಭಟನಾಕಾರರ ಗುಂಪು ಹಿಂಸಾಚಾರದಲ್ಲಿ ಭಾಗಿಯಾಗಿತ್ತು. ಘಟನೆಯಲ್ಲಿ 400ರಷ್ಟು ಪೊಲೀಸರು ಗಾಯಗೊಂಡಿದ್ದರು. ಅಲ್ಲದೆ ಟ್ರ್ಯಾಕ್ಟರ್ ಮಗುಚಿ ಓರ್ವ ಪ್ರತಿಭಟನಾಕಾರ ಮೃತಪಟ್ಟಿದ್ದರು.