ದೆಹಲಿ: ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿ ಪರಿಸರದಲ್ಲಿ ಮಾಲಿನ್ಯಕಾರಕಗಳ ಶೇಖರಣೆ ಹೆಚ್ಚಾಗಿದೆ. ಹೀಗಾಗಿ ಸೋಮವಾರ ಬೆಳಿಗ್ಗೆ ರಾಷ್ಟ್ರರಾಜಧಾನಿಯ ವಾಯು ಗುಣಮಟ್ಟವು ‘ಅತ್ಯಂತ ಕಳಪೆ’ ಮಟ್ಟಕ್ಕೆ ಕುಸಿದಿದೆ. ಇನ್ನೊಂದೆಡೆ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಿಡಿಸಲಾಗುತ್ತಿರುವ ಪಟಾಕಿಗಳು ಮತ್ತು ಕೃಷಿ ತ್ಯಾಜ್ಯ ದಹನದಿಂದಾಗಿ ಪರಿಸ್ಥಿತಿ ಮತ್ತಷ್ಟು ಸಂಕೀರ್ಣಗೊಂಡಿದೆ.