ಸಿಂಗು ಗಡಿಯ ಜೊತೆಗೆ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ಕಳೆದ ವರ್ಷದ ನವೆಂಬರ್ 26ರಂದು ದೆಹಲಿಯ ಟಿಕ್ರಿ ಹಾಗೂ ಗಾಜಿಪುರ ಗಡಿಗಳನ್ನು ಬಂದ್ ಮಾಡಿದ್ದರು. ಟಿಕ್ರಿ ಗಡಿಯಲ್ಲಿ ಈಗಾಗಲೇ ವಾಹನ ಸಂಚಾರಕ್ಕೆ ರಸ್ತೆಗಳನ್ನು ಮುಕ್ತಗೊಳಿಸಲಾಗಿದ್ದು, ಸಂಚಾರ ದಟ್ಟಣೆ ಹೆಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ.