ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವ್ಯಕ್ತಿ ಸ್ವಾತಂತ್ರ್ಯ ಇರದ ಪ್ರಜಾಪ್ರಭುತ್ವಕ್ಕೆ ಅರ್ಥವೇ ಇಲ್ಲ: ನಸ್ರೀನ್

Last Updated 4 ನವೆಂಬರ್ 2021, 8:15 IST
ಅಕ್ಷರ ಗಾತ್ರ

ನವದೆಹಲಿ: ‘ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥವೇ ಇಲ್ಲ’ ಎಂದು ಬಾಂಗ್ಲಾದೇಶ ಮೂಲದ ಲೇಖಕಿ ತಸ್ಲಿಮಾ ನಸ್ರೀನ್‌ ಹೇಳಿದರು.

ಖ್ಯಾತ ಲೇಖಕ ಹಾಗೂ ಪತ್ರಿಕೆಯ ಸಂಪಾದಕ ರಾಜೇಂದ್ರ ಯಾದವ್‌ ಸ್ಮರಣಾರ್ಥ ಹಿಂದಿ ಭಾಷೆಯ ಸಾಹಿತ್ಯಕ ನಿಯತಕಾಲಿಕೆ ‘ಹಂಸ್’ ಹಮ್ಮಿಕೊಂಡಿದ್ದ ‘ರಾಜೇಂದ್ರ ಯಾದವ್ ಸ್ಮೃತಿ ಸಮಾರೋಹ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾನು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣದ ವಿರುದ್ಧದ ಹೋರಾಟವನ್ನು ಮುಂದುವರಿಸುತ್ತೇನೆ. ಮಹಿಳೆಯರ ಹಕ್ಕುಗಳು, ನೈಜ ಜಾತ್ಯತೀತತೆ, ಮಾನವ ಹಕ್ಕುಗಳು ಹಾಗೂ ಕೋಮುಸೌಹಾರ್ದದ ಪರ ಹೋರಾಟವನ್ನು ನಿಲ್ಲಿಸುವುದಿಲ್ಲ. ಅನ್ಯಾಯ ಹಾಗೂ ಮೂಲಭೂತವಾದದ ವಿರುದ್ಧ ಧ್ವನಿ ಎತ್ತುವುದನ್ನು ಮುಂದುವರಿಸುವೆ’ ಎಂದು ಹೇಳಿದರು.

ಕಳೆದ ದಶಕದಲ್ಲಿ ‘ಹಂಸ್’ ಪತ್ರಿಕೆಯಲ್ಲಿ ಪ್ರಕಟವಾಗಿರುವ ತಸ್ಲಿಮಾ ನಸ್ರೀನ್‌ ಅವರ ಆಯ್ದ ಲೇಖನಗಳನ್ನು ಒಳಗೊಂಡಿರುವ ‘ಶಬ್ದವೇಧಿ, ಶಬ್ದಭೇದಿ’ ಸೇರಿದಂತೆ ಮೂರು ಕೃತಿಗಳನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ನಸ್ರೀನ್‌ ಅವರ ಲೇಖನಗಳನ್ನು ಅಮೃತಾ ಬೇರಾ ಅವರು ಅನುವಾದಿಸಿದ್ದು, ಪತ್ರಕರ್ತ ಸಂಗಮ್‌ ಪಾಂಡೆ ಸಂಪಾದಿಸಿದ್ದಾರೆ ಎಂದು ಪತ್ರಿಕೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT