<p><strong>ನವದೆಹಲಿ</strong>: ‘ನೋಟು ಅಮಾನ್ಯೀಕರಣವು ಆರ್ಥಿಕ ನೀತಿಯ ಭಾಗವಾಗಿ ಕೈಗೊಂಡ ಅತ್ಯಂತ ಕಠಿಣ ನಿರ್ಧಾರ. ಭಾರತೀಯ ರಿಸರ್ವ್ ಬ್ಯಾಂಕ್ನೊಂದಿಗೆ (ಆರ್ಬಿಐ) ವ್ಯಾಪಕ ಸಮಾಲೋಚನೆ ನಡೆಸಿದ ಬಳಿಕ ಹಾಗೂ ಪೂರ್ವ ತಯಾರಿಗಳನ್ನು ಮಾಡಿಕೊಂಡ ನಂತರವೇ ಈ ತೀರ್ಮಾನ ತೆಗೆದುಕೊಳ್ಳಲಾಗಿತ್ತು’ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ನೋಟು ಅಮಾನ್ಯೀಕರಣ ನಿರ್ಧಾರದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವು ಈ ಕುರಿತು ವಿಸ್ತೃತ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.</p>.<p>ಈ ಕುರಿತು ಲಿಖಿತ ಪ್ರತಿಕ್ರಿಯೆ ಸಲ್ಲಿಸಿರುವ ಕೇಂದ್ರ ಹಣಕಾಸು ಸಚಿವಾಲಯ ‘ಆರ್ಥಿಕ ನೀತಿಯ ಸುಧಾರಣೆಯ ಹಂತವಾಗಿ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿತ್ತು.₹500 ಹಾಗೂ ₹1,000 ಮುಖಬೆಲೆಯ ನೋಟುಗಳನ್ನು ಹಿಂಪಡೆದಿದ್ದು ಇದರಲ್ಲೊಂದು’ ಎಂದು ಹೇಳಿದೆ.</p>.<p>‘ನೋಟು ಅಮಾನ್ಯೀಕರಣವು ನಕಲಿ ಹಾಗೂ ಕಪ್ಪು ಹಣಕ್ಕೆ ಕಡಿವಾಣ ಹಾಕುವ, ಭಯೋತ್ಪಾದನೆಗೆ ಹಣಕಾಸಿನ ನೆರವು ಒದಗಿಸುವುದನ್ನು ತಪ್ಪಿಸುವ, ತೆರಿಗೆ ವಂಚನೆಯನ್ನು ತಡೆಯುವ ಕಾರ್ಯತಂತ್ರದ ಭಾಗವಾಗಿತ್ತು. ನೋಟು ಅಮಾನ್ಯೀಕರಣದ ಬಳಿಕ ದೇಶದ ಆರ್ಥಿಕತೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿತ್ತು’ ಎಂದೂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನೋಟು ಅಮಾನ್ಯೀಕರಣವು ಆರ್ಥಿಕ ನೀತಿಯ ಭಾಗವಾಗಿ ಕೈಗೊಂಡ ಅತ್ಯಂತ ಕಠಿಣ ನಿರ್ಧಾರ. ಭಾರತೀಯ ರಿಸರ್ವ್ ಬ್ಯಾಂಕ್ನೊಂದಿಗೆ (ಆರ್ಬಿಐ) ವ್ಯಾಪಕ ಸಮಾಲೋಚನೆ ನಡೆಸಿದ ಬಳಿಕ ಹಾಗೂ ಪೂರ್ವ ತಯಾರಿಗಳನ್ನು ಮಾಡಿಕೊಂಡ ನಂತರವೇ ಈ ತೀರ್ಮಾನ ತೆಗೆದುಕೊಳ್ಳಲಾಗಿತ್ತು’ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ನೋಟು ಅಮಾನ್ಯೀಕರಣ ನಿರ್ಧಾರದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವು ಈ ಕುರಿತು ವಿಸ್ತೃತ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.</p>.<p>ಈ ಕುರಿತು ಲಿಖಿತ ಪ್ರತಿಕ್ರಿಯೆ ಸಲ್ಲಿಸಿರುವ ಕೇಂದ್ರ ಹಣಕಾಸು ಸಚಿವಾಲಯ ‘ಆರ್ಥಿಕ ನೀತಿಯ ಸುಧಾರಣೆಯ ಹಂತವಾಗಿ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿತ್ತು.₹500 ಹಾಗೂ ₹1,000 ಮುಖಬೆಲೆಯ ನೋಟುಗಳನ್ನು ಹಿಂಪಡೆದಿದ್ದು ಇದರಲ್ಲೊಂದು’ ಎಂದು ಹೇಳಿದೆ.</p>.<p>‘ನೋಟು ಅಮಾನ್ಯೀಕರಣವು ನಕಲಿ ಹಾಗೂ ಕಪ್ಪು ಹಣಕ್ಕೆ ಕಡಿವಾಣ ಹಾಕುವ, ಭಯೋತ್ಪಾದನೆಗೆ ಹಣಕಾಸಿನ ನೆರವು ಒದಗಿಸುವುದನ್ನು ತಪ್ಪಿಸುವ, ತೆರಿಗೆ ವಂಚನೆಯನ್ನು ತಡೆಯುವ ಕಾರ್ಯತಂತ್ರದ ಭಾಗವಾಗಿತ್ತು. ನೋಟು ಅಮಾನ್ಯೀಕರಣದ ಬಳಿಕ ದೇಶದ ಆರ್ಥಿಕತೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿತ್ತು’ ಎಂದೂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>