<p><strong>ನವದೆಹಲಿ (ಪಿಟಿಐ):</strong> ‘ಕೇಂದ್ರ ಸರ್ಕಾರವು ‘ಅರಣ್ಯ (ಸಂರಕ್ಷಣಾ) ತಿದ್ದುಪಡಿ ಮಸೂದೆ’ಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ನೀಡುವ ಬದಲಿಗೆ, ಜಂಟಿ ಸಮಿತಿಗೆ ನೀಡಿದೆ. ಈ ಮೂಲಕ ಸ್ಥಾಯಿ ಸಮಿತಿಯನ್ನು ಅಪಮೌಲ್ಯ ಮತ್ತು ಅವಹೇಳನ ಮಾಡಿದೆ’ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಈ ಸಂಬಂಧ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ಅವರು, ಈ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ ಎಂದು ಆಗ್ರಹಿಸಿದ್ದಾರೆ.</p>.<p>‘ಸದನಗಳಲ್ಲಿ ಮಂಡನೆಯಾಗುವ ಮಸೂದೆಗಳ ಪರಿಶೀಲನೆ ಅಗತ್ಯವಿದ್ದರೆ, ಅದನ್ನು ಸಂಬಂಧಿತ ಸಂಸದೀಯ ಸ್ಥಾಯಿ ಸಮಿತಿಗೆ ನೀಡಲಾಗುತ್ತದೆ. ಆದರೆ, ಸರ್ಕಾರವು ಈ ಮಸೂದೆಯನ್ನು ಜಂಟಿ ಸಮಿತಿಗೆ ನೀಡಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಸಂಸತ್ತಿನ ಉಭಯ ಸದನಗಳ ಸದಸ್ಯರನ್ನು ಒಳಗೊಂಡ ಎಂಟು ಸ್ಥಾಯಿ ಸಮಿತಿಗಳು ಇವೆ. ‘ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸ್ಥಾಯಿ ಸಮಿತಿ’ಗೆ ಜೈರಾಮ್ ರಮೇಶ್ ಅಧ್ಯಕ್ಷರಾಗಿದ್ದಾರೆ.</p>.<p>‘ನಾನು ಕಾಂಗ್ರೆಸ್ ಹಾಗೂ ಎಲ್ಲಾ ವಿರೋಧ ಪಕ್ಷಗಳ ಪರವಾಗಿ ಈ ಪತ್ರ ಬರೆಯುತ್ತಿದ್ದೇನೆ. ಸಂಸದೀಯ ಸ್ಥಾಯಿ ಸಮಿತಿಯ ಶಕ್ತಿಯನ್ನು ಸಂಪೂರ್ಣವಾಗಿ ಕುಂದಿಸುವ ಪ್ರಯತ್ನ ನಡೆಯುತ್ತಿದೆ. ಮಸೂದೆಯ ಪರಿಶೀಲನೆಗಾಗಿ ಲೋಕಸಭೆಯಲ್ಲಿ ಮೊದಲು ಜಂಟಿ ಸಂಸದೀಯ ಸಮಿತಿಗೆ ನೀಡಲಾಯಿತು. ನಂತರ ರಾಜ್ಯಸಭೆಯಲ್ಲಿ ನೀಡಲಾಯಿತು. ಈ ಮಸೂದೆಯು ನಮ್ಮ ಸ್ಥಾಯಿ ಸಮಿತಿಯ ಕಾರ್ಯವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಈ ಮಸೂದೆಯ ಪರಿಶೀಲನೆ ನಡೆಸಲು ಸಂಸದೀಯ ಸ್ಥಾಯಿ ಸಮಿತಿಗೆ ನೀಡಿಲ್ಲ’ ಎಂದು ರಮೇಶ್ ಅವರು ಪತ್ರದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ‘ಕೇಂದ್ರ ಸರ್ಕಾರವು ‘ಅರಣ್ಯ (ಸಂರಕ್ಷಣಾ) ತಿದ್ದುಪಡಿ ಮಸೂದೆ’ಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ನೀಡುವ ಬದಲಿಗೆ, ಜಂಟಿ ಸಮಿತಿಗೆ ನೀಡಿದೆ. ಈ ಮೂಲಕ ಸ್ಥಾಯಿ ಸಮಿತಿಯನ್ನು ಅಪಮೌಲ್ಯ ಮತ್ತು ಅವಹೇಳನ ಮಾಡಿದೆ’ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಈ ಸಂಬಂಧ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ಅವರು, ಈ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ ಎಂದು ಆಗ್ರಹಿಸಿದ್ದಾರೆ.</p>.<p>‘ಸದನಗಳಲ್ಲಿ ಮಂಡನೆಯಾಗುವ ಮಸೂದೆಗಳ ಪರಿಶೀಲನೆ ಅಗತ್ಯವಿದ್ದರೆ, ಅದನ್ನು ಸಂಬಂಧಿತ ಸಂಸದೀಯ ಸ್ಥಾಯಿ ಸಮಿತಿಗೆ ನೀಡಲಾಗುತ್ತದೆ. ಆದರೆ, ಸರ್ಕಾರವು ಈ ಮಸೂದೆಯನ್ನು ಜಂಟಿ ಸಮಿತಿಗೆ ನೀಡಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಸಂಸತ್ತಿನ ಉಭಯ ಸದನಗಳ ಸದಸ್ಯರನ್ನು ಒಳಗೊಂಡ ಎಂಟು ಸ್ಥಾಯಿ ಸಮಿತಿಗಳು ಇವೆ. ‘ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸ್ಥಾಯಿ ಸಮಿತಿ’ಗೆ ಜೈರಾಮ್ ರಮೇಶ್ ಅಧ್ಯಕ್ಷರಾಗಿದ್ದಾರೆ.</p>.<p>‘ನಾನು ಕಾಂಗ್ರೆಸ್ ಹಾಗೂ ಎಲ್ಲಾ ವಿರೋಧ ಪಕ್ಷಗಳ ಪರವಾಗಿ ಈ ಪತ್ರ ಬರೆಯುತ್ತಿದ್ದೇನೆ. ಸಂಸದೀಯ ಸ್ಥಾಯಿ ಸಮಿತಿಯ ಶಕ್ತಿಯನ್ನು ಸಂಪೂರ್ಣವಾಗಿ ಕುಂದಿಸುವ ಪ್ರಯತ್ನ ನಡೆಯುತ್ತಿದೆ. ಮಸೂದೆಯ ಪರಿಶೀಲನೆಗಾಗಿ ಲೋಕಸಭೆಯಲ್ಲಿ ಮೊದಲು ಜಂಟಿ ಸಂಸದೀಯ ಸಮಿತಿಗೆ ನೀಡಲಾಯಿತು. ನಂತರ ರಾಜ್ಯಸಭೆಯಲ್ಲಿ ನೀಡಲಾಯಿತು. ಈ ಮಸೂದೆಯು ನಮ್ಮ ಸ್ಥಾಯಿ ಸಮಿತಿಯ ಕಾರ್ಯವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಈ ಮಸೂದೆಯ ಪರಿಶೀಲನೆ ನಡೆಸಲು ಸಂಸದೀಯ ಸ್ಥಾಯಿ ಸಮಿತಿಗೆ ನೀಡಿಲ್ಲ’ ಎಂದು ರಮೇಶ್ ಅವರು ಪತ್ರದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>