ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೌಕ್ತೆ ಮತ್ತಷ್ಟು ತೀವ್ರ: ಮೇ 18ಕ್ಕೆ ಗುಜರಾತ್‌ ಕರಾವಳಿ ದಾಟಲಿರುವ ಚಂಡಮಾರುತ

ಸಂಭಾವ್ಯ ಪರಿಸ್ಥಿತಿ ಎದುರಿಸಲು ಎನ್‌ಡಿಆರ್‌ಎಫ್‌ನ 100 ತಂಡ ಸನ್ನದ್ಧ
Last Updated 15 ಮೇ 2021, 10:45 IST
ಅಕ್ಷರ ಗಾತ್ರ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹೆಚ್ಚಿದ್ದು, ‘ತೌಕ್ತೆ’ ಚಂಡಮಾರುತ ಮತ್ತಷ್ಟು ತೀವ್ರಸ್ವರೂಪ ಪಡೆದುಕೊಂಡಿದೆ.

ಗುಜರಾತ್‌ನತ್ತ ಸಾಗಿರುವ ಚಂಡಮಾರುತ, ಪೋರಬಂದರ್‌ ಹಾಗೂ ನಲಿಯಾ ನಡುವಿನ ಕರಾವಳಿ ಪ್ರದೇಶವನ್ನು ಮೇ 18ರ ವೇಳೆಗೆ ದಾಟುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ.

ಮೇ 16ರಿಂದ 18ರ ವರೆಗಿನ ಅವಧಿಯಲ್ಲಿ ತೌಕ್ತೆ ಚಂಡಮಾರುತ ಹೆಚ್ಚು ತೀವ್ರವಾಗಿರಲಿದೆ ಎಂದೂ ಐಎಂಡಿ ಹೇಳಿದೆ.

ಚಂಡಮಾರುತದಿಂದ ಉದ್ಭವಿಸುವ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ (ಎನ್‌ಡಿಆರ್‌ಎಫ್‌) 100 ತಂಡಗಳನ್ನು ಸಜ್ಜಗೊಳಿಸಲಾಗಿದೆ. ಈ ಮೊದಲು 53 ತಂಡಗಳನ್ನು ರಚಿಸಲಾಗಿತ್ತು. ಶನಿವಾರದ ವೇಳೆ ಈ ಪ್ರಾಕೃತಿಕ ವಿಕೋಪ ತೀವ್ರ ಸ್ವರೂಪ ಪಡೆದ ಕಾರಣ, ಪರಿಹಾರ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ತಂಡಗಳ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸಲಾಗಿದೆ.

ಕೇರಳದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿರುವ, ಕರ್ನಾಟಕದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿರುವ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಹಾನಿ ಸಾಧ್ಯತೆ ಕುರಿತು ಕೇಂದ್ರೀಯ ಜಲ ಆಯೋಗ ಎಚ್ಚರಿಕೆ ನೀಡಿದೆ.

ಮೇ 15 ಹಾಗೂ 16ರಂದು ಗೋವಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಸಿಬ್ಬಂದಿಯನ್ನು ಸಂಭಾವ್ಯ ಪರಿಸ್ಥಿತಿಯನ್ನು ಎದುರಿಸಲು ಗೋವಾ ಸರ್ಕಾರ ಸಜ್ಜಗೊಳಿಸಿದೆ.

‘ಚಂಡಮಾರುತದಿಂದ ಉದ್ಭವಿಸುವ ಪರಿಸ್ಥಿತಿಯನ್ನು ಎದುರಿಸುವ ಸಂಬಂಧ ಎಲ್ಲ ಅಗತ್ಯ ಕ್ರಮಕೈಗೊಂಡು, ಸನ್ನದ್ಧ ಸ್ಥಿತಿಯಲ್ಲಿ ಇರಬೇಕು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚಂಡಮಾರುತದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪರಿಹಾರ ಕಾರ್ಯ, ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT