ಈ ಹಿನ್ನೆಲೆಯಲ್ಲಿ ಸೋಮವಾರ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಮಿಳುನಾಡು ಸರ್ಕಾರವು ಸಭೆ ನಡೆಸಿದ್ದು, ಸಂಬಂಧಪಟ್ಟ ಎಲ್ಲ ಜಿಲ್ಲಾಡಳಿತಗಳೂ ಸಜ್ಜಾಗಿರಬೇಕು ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಸೂಚಿಸಿದ್ದಾರೆ. ‘ಗಂಟೆಗೆ 100–120 ಕಿ.ಮೀ. ವೇಗದಲ್ಲಿ ನ.25ರಂದು ಮಧ್ಯಾಹ್ನ ತಮಿಳುನಾಡು–ಪುದುಚೇರಿ ಕರಾವಳಿಯ ಕರೈಕಲ್ ಮತ್ತು ಮಾಮಲ್ಲಪುರಂ ನಡುವೆ ಭೂಸ್ಪರ್ಶಿಸಲಿದೆ. ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡು, ಪುದುಚೇರಿ, ಕರೈಕಲ್ನಲ್ಲಿ ನ.24ರಿಂದ 26ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆ, ಬಿರುಸಾದ ಗಾಳಿ ಇರಲಿದೆ’ ಎಂದು ಐಎಂಡಿ ಎಚ್ಚರಿಸಿದೆ.