ಸಿಎಂ ಕಚೇರಿಯ ಉಪ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಚಂದ್ರ ಠಾಕೂರ್, ವಸಂತ್ ವಿಹಾರ್ನ ಉಪವಿಭಾಗಾಧಿಕಾರಿ ಹರ್ಷಿತ್ ಜೈನ್ ಮತ್ತು ವಿವೇಕ್ ವಿಹಾರ್ನ ದೇವೇಂದ್ರ ಶರ್ಮಾ ಅವರನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧವೂ ಶಿಸ್ತುಕ್ರಮಕ್ಕೆ ಆದೇಶಿಸಲಾಗಿದೆ.
ಈ ಕ್ರಮವು ಲೆಫ್ಟಿನೆಂಟ್ ಗವರ್ನರ್ ಅವರ ಭ್ರಷ್ಟಾಚಾರ ವಿರುದ್ಧದ ಶೂನ್ಯ ಸಹಿಷ್ಣುತೆ ಮತ್ತು ಸರ್ಕಾರಿ ಕೆಲಸದಲ್ಲಿ ಪ್ರಾಮಾಣಿಕತೆ ಖಚಿತ ಪಡಿಸುವ ಅವರ ಬದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಮೂಲಗಳು ಹೇಳಿವೆ.