<p><strong>ಮುಂಬೈ</strong>: ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಂಚಿನ ಮುಖ್ಯ ಸೂತ್ರಧಾರರಾಗಿದ್ದು, ಇದಕ್ಕಾಗಿ ಅವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಬಾಂಬೆ ಹೈಕೋರ್ಟ್ಗೆ ತಿಳಿಸಿದೆ.</p>.<p>ಪೊಲೀಸ್ ಅಧಿಕಾರಿಗಳನ್ನು ಅನುಕೂಲಕರವಾದ ವರ್ಗಾವಣೆ ನಡೆಸುವಲ್ಲೂ ದೇಶಮುಖ್ ಅವರು ಪ್ರಭಾವ ಬೀರಿದ್ದಾರೆ ಎಂದೂ ಇ.ಡಿ ಆರೋಪಿಸಿದೆ.</p>.<p>ದೇಶಮುಖ್ ಅವರ ಜಾಮೀನು ಅರ್ಜಿಗೆ ಪ್ರತಿಯಾಗಿ ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಇ.ಡಿ ಈ ಆರೋಪಗಳನ್ನು ಮಾಡಿದ್ದು, ದೇಶಮುಖ್ ಅವರು ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕೋರಿದೆ.</p>.<p>‘ಅನಿಲ್ ದೇಶಮುಖ್ ಅವರು ಪುತ್ರ ಹೃಷಿಕೇಶ್ ದೇಶಮುಖ್, ಸಚಿನ್ ವಾಜೆ (ವಜಾಗೊಂಡಿರುವ ಪೊಲೀಸ್ ಅಧಿಕಾರಿ), ಸಂಜೀವ್ ಪಳಾಂದೆ ಮತ್ತು ಕುಂದನ್ ಶಿಂಧೆ ಜೊತೆ ಸೇರಿ ಸಂಚು ರೂಪಿಸಿದ್ದರು’ ಎಂದೂ ಇ.ಡಿ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಂಚಿನ ಮುಖ್ಯ ಸೂತ್ರಧಾರರಾಗಿದ್ದು, ಇದಕ್ಕಾಗಿ ಅವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಬಾಂಬೆ ಹೈಕೋರ್ಟ್ಗೆ ತಿಳಿಸಿದೆ.</p>.<p>ಪೊಲೀಸ್ ಅಧಿಕಾರಿಗಳನ್ನು ಅನುಕೂಲಕರವಾದ ವರ್ಗಾವಣೆ ನಡೆಸುವಲ್ಲೂ ದೇಶಮುಖ್ ಅವರು ಪ್ರಭಾವ ಬೀರಿದ್ದಾರೆ ಎಂದೂ ಇ.ಡಿ ಆರೋಪಿಸಿದೆ.</p>.<p>ದೇಶಮುಖ್ ಅವರ ಜಾಮೀನು ಅರ್ಜಿಗೆ ಪ್ರತಿಯಾಗಿ ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಇ.ಡಿ ಈ ಆರೋಪಗಳನ್ನು ಮಾಡಿದ್ದು, ದೇಶಮುಖ್ ಅವರು ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕೋರಿದೆ.</p>.<p>‘ಅನಿಲ್ ದೇಶಮುಖ್ ಅವರು ಪುತ್ರ ಹೃಷಿಕೇಶ್ ದೇಶಮುಖ್, ಸಚಿನ್ ವಾಜೆ (ವಜಾಗೊಂಡಿರುವ ಪೊಲೀಸ್ ಅಧಿಕಾರಿ), ಸಂಜೀವ್ ಪಳಾಂದೆ ಮತ್ತು ಕುಂದನ್ ಶಿಂಧೆ ಜೊತೆ ಸೇರಿ ಸಂಚು ರೂಪಿಸಿದ್ದರು’ ಎಂದೂ ಇ.ಡಿ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>