ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ಧತೆ: ಫಡಣವೀಸ್‌ರಿಂದ ಹಕ್ಕು ಮಂಡನೆ?

ಅಕ್ಷರ ಗಾತ್ರ

ಮುಂಬೈ: ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಮತ್ತು ಶಿವಸೇನಾ ಬಂಡಾಯ ಶಾಸಕರ ನಾಯಕ ಏಕನಾಥ ಶಿಂಧೆ ಅವರು ಹೊಸ ಸರ್ಕಾರದ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಜ್ಜಾಗಿದೆ ಎಂದು ಮೂಲಗಳು ಹೇಳಿವೆ.

ಫಡಣವೀಸ್‌ ಹಾಗೂ ಶಿಂಧೆಯವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಈ ಮೂಲಕ ಸರ್ಕಾರ ರಚನೆಗೆ ಔಪಚಾರಿಕ ಪತ್ರ ಮತ್ತು ಶಾಸಕರ ಬೆಂಬಲದ ಪತ್ರವನ್ನು ನೀಡುವ ನಿರೀಕ್ಷೆಯಿದೆ.

ಶಿಂಧೆ ಅವರು ಗೋವಾದಿಂದ ಮುಂಬೈಗೆ ಬಂದಿಳಿದಿದ್ದು, ಶೀಘ್ರದಲ್ಲೇ ಫಡಣವೀಸ್‌ರನ್ನು ಭೇಟಿಯಾಗಲಿದ್ದಾರೆ. ಆ ಬಳಿಕ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ.

ಈ ಮಧ್ಯೆ, ಮುಂಬೈನಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರತ್ಯೇಕ ಸಭೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡಿದರು.

ಇವನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT