ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಮಲದ ಬಾಲಾಜಿಗೆ ₹2 ಕೋಟಿ ಮೌಲ್ಯದ ಚಿನ್ನದ ಆಭರಣ ಅರ್ಪಿಸಿದ ತಮಿಳುನಾಡಿನ ಭಕ್ತ

Last Updated 24 ಫೆಬ್ರುವರಿ 2021, 17:02 IST
ಅಕ್ಷರ ಗಾತ್ರ

ತಿರುಪತಿ (ಆಂಧ್ರ ಪ್ರದೇಶ): ತಿರುಮಲದ ವೆಂಕಟೇಶ್ವರ ದೇವಾಲಯಕ್ಕೆ ತಮಿಳುನಾಡು ಮೂಲದ ಭಕ್ತರೊಬ್ಬರು ₹2 ಕೋಟಿ ಮೌಲ್ಯದ ಚಿನ್ನದ ಆಭರಣಗಳನ್ನು ಅರ್ಪಿಸಿದ್ದಾರೆ.

ತಮಿಳುನಾಡಿನ ಥೇನಿಯ ಭಕ್ತ ಥಂಗದೊರೈ ಪೂಜೆಯ ಬಳಿಕ ಚಿನ್ನದ ಶಂಕು ಮತ್ತು ಚಕ್ರವನ್ನು ದೇವಾಲಯದ ಆಡಳಿತ ಮಂಡಳಿಗೆ ನೀಡಿದ್ದಾರೆ. ಚಿನ್ನದ ಕಾಣಿಕೆಗಳ ತೂಕ 3.5 ಕೆ.ಜಿ. ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್‌–19 ಲಾಕ್‌ಡೌನ್‌ ಸಮಯದಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಭಕ್ತಾದಿಯು ಗುಣಮುಖರಾಗಲು ಪ್ರಾರ್ಥನೆ ಸಲ್ಲಿಸಿ, ಚಿನ್ನದ ಆಭರಣಗಳನ್ನು ಅರ್ಪಿಸುವ ಹರಕೆಯೊತ್ತಿದ್ದರು. ಅವರು ಗುಣಮುಖರಾಗಿದ್ದು, ಹರಕೆ ತೀರಿಸುವ ಸಲುವಾಗಿ ಇದನ್ನು ಅರ್ಪಿಸಿದ್ದಾರೆ ಎಂದು ಭಕ್ತಾದಿ ತಿಳಿಸಿರುವುದಾಗಿ ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT