ಪುರಿ ಜಗನ್ನಾಥ ಸ್ವಾಮಿ ‘ಸ್ನಾನಜಾತ್ರೆ’ಗೆ ಭಕ್ತರಿಗೆ ಅವಕಾಶ

ಪುರಿ: 2 ವರ್ಷಗಳ ನಂತರ ಒಡಿಶಾದ ಪುರಿಯಲ್ಲಿರುವ ಪ್ರಸಿದ್ಧ ಜಗನ್ನಾಥ ಸ್ವಾಮಿ ಮತ್ತಿತರ ದೇವರ ‘ಸ್ನಾನ ಜಾತ್ರೆ’ ಯನ್ನು (ವಿಗ್ರಹ ಅಲಂಕಾರ) ಭಕ್ತರು ಕಣ್ತುಂಬಿಕೊಳ್ಳಲು ಅವಕಾಶ ನೀಡಲಾಗಿದೆ. ಜೂ.14ರಂದು 12ನೇ ಶತಮಾನದ ಪುರಾತನ ದೇಗುಲದ ಹೊರಭಾಗದಲ್ಲಿ ಈ ಕಾರ್ಯಕ್ರಮವು ಜರುಗಲಿದೆ.
ಶ್ರೀ ಜಗನ್ನಾಥ ದೇಗುಲ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ‘ಸ್ನಾನ ಜಾತ್ರೆ’ಯಲ್ಲಿ ಭಕ್ತರು ಪಾಲ್ಗೊಳ್ಳುವುದನ್ನು ನಿರ್ಬಂಧಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.