‘ಸಿಬಿಐ ಅಧಿಕಾರಿಗಳ ತಂಡವು ಪಂಚನಾಮೆ ನಡೆಸುತ್ತಿರುವಾಗ ಬಿಷ್ಣೋಯಿ ಅವರು ನಾಲ್ಕನೇ ಮಹಡಿಯಲ್ಲಿದ್ದ ತಮ್ಮ ಕಚೇರಿಯಿಂದ ಕೆಳಕ್ಕೆ ಜಿಗಿದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ಈ ಸಂಬಂಧ ಪ್ರದ್ಯುಮನ್ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ’ ಎಂದು ರಾಜ್ಕೋಟ್ ನಗರ ಪೊಲೀಸರು ತಿಳಿಸಿದ್ದಾರೆ.