<p><strong>ಅಹಮದಾಬಾದ್</strong>: ಉದ್ಯಮಿಯೊಬ್ಬರಿಂದ ₹5 ಲಕ್ಷ ಲಂಚ ಪಡೆದ ವೇಳೆ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ವಿದೇಶ ವ್ಯಾಪಾರ ಮಹಾ ನಿರ್ದೇಶನಾಲಯದ (ಡಿಜಿಎಫ್ಟಿ) ಜಂಟಿ ನಿರ್ದೇಶಕ ಜಾವ್ರಿ ಮಾಲ್ ಬಿಷ್ಣೋಯಿ ಎಂಬುವರು ಅದಾಗಿ ಕೆಲ ಗಂಟೆಗಳಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಆಹಾರದ ಡಬ್ಬಗಳನ್ನು ರಫ್ತು ಮಾಡಲು ಅಗತ್ಯವಿರುವ ನಿರಾಕ್ಷೇಪಣಾ ಪತ್ರ (ಎನ್ಒಸಿ) ಒದಗಿಸುವುದಕ್ಕಾಗಿ ಬಿಷ್ಣೋಯಿ ಅವರು ಉದ್ಯಮಿಯೊಬ್ಬರ ಬಳಿ ₹9 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.</p>.<p>‘ಸಿಬಿಐ ಅಧಿಕಾರಿಗಳ ತಂಡವು ಪಂಚನಾಮೆ ನಡೆಸುತ್ತಿರುವಾಗ ಬಿಷ್ಣೋಯಿ ಅವರು ನಾಲ್ಕನೇ ಮಹಡಿಯಲ್ಲಿದ್ದ ತಮ್ಮ ಕಚೇರಿಯಿಂದ ಕೆಳಕ್ಕೆ ಜಿಗಿದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ಈ ಸಂಬಂಧ ಪ್ರದ್ಯುಮನ್ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ’ ಎಂದು ರಾಜ್ಕೋಟ್ ನಗರ ಪೊಲೀಸರು ತಿಳಿಸಿದ್ದಾರೆ.</p>.<p>ಬಿಷ್ಣೋಯಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿರುವ ಅವರ ಕುಟುಂಬದ ಸದಸ್ಯರು ಮೃತದೇಹವನ್ನು ತಮ್ಮ ಸುಪರ್ದಿಗೆ ಪಡೆಯಲು ನಿರಾಕರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಉದ್ಯಮಿಯೊಬ್ಬರಿಂದ ₹5 ಲಕ್ಷ ಲಂಚ ಪಡೆದ ವೇಳೆ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ವಿದೇಶ ವ್ಯಾಪಾರ ಮಹಾ ನಿರ್ದೇಶನಾಲಯದ (ಡಿಜಿಎಫ್ಟಿ) ಜಂಟಿ ನಿರ್ದೇಶಕ ಜಾವ್ರಿ ಮಾಲ್ ಬಿಷ್ಣೋಯಿ ಎಂಬುವರು ಅದಾಗಿ ಕೆಲ ಗಂಟೆಗಳಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಆಹಾರದ ಡಬ್ಬಗಳನ್ನು ರಫ್ತು ಮಾಡಲು ಅಗತ್ಯವಿರುವ ನಿರಾಕ್ಷೇಪಣಾ ಪತ್ರ (ಎನ್ಒಸಿ) ಒದಗಿಸುವುದಕ್ಕಾಗಿ ಬಿಷ್ಣೋಯಿ ಅವರು ಉದ್ಯಮಿಯೊಬ್ಬರ ಬಳಿ ₹9 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.</p>.<p>‘ಸಿಬಿಐ ಅಧಿಕಾರಿಗಳ ತಂಡವು ಪಂಚನಾಮೆ ನಡೆಸುತ್ತಿರುವಾಗ ಬಿಷ್ಣೋಯಿ ಅವರು ನಾಲ್ಕನೇ ಮಹಡಿಯಲ್ಲಿದ್ದ ತಮ್ಮ ಕಚೇರಿಯಿಂದ ಕೆಳಕ್ಕೆ ಜಿಗಿದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ಈ ಸಂಬಂಧ ಪ್ರದ್ಯುಮನ್ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ’ ಎಂದು ರಾಜ್ಕೋಟ್ ನಗರ ಪೊಲೀಸರು ತಿಳಿಸಿದ್ದಾರೆ.</p>.<p>ಬಿಷ್ಣೋಯಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿರುವ ಅವರ ಕುಟುಂಬದ ಸದಸ್ಯರು ಮೃತದೇಹವನ್ನು ತಮ್ಮ ಸುಪರ್ದಿಗೆ ಪಡೆಯಲು ನಿರಾಕರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>