<p class="title"><strong>ರಾಂಚಿ (ಪಿಟಿಐ): </strong>ಧನ್ಬಾದ್ ಕೋರ್ಟ್ನ ನ್ಯಾಯಾಧೀಶರಾಗಿದ್ದ ಉತ್ತಮ್ ಆನಂದ್ ಅವರಿಗೆ ಆಟೊ ಚಾಲಕ ಉದ್ದೇಶಪೂರ್ವಕವಾಗಿಯೇ ಡಿಕ್ಕಿ ಹೊಡೆದಿದ್ದ ಎಂದು ಸಿಬಿಐ ಗುರುವಾರ ಜಾರ್ಖಂಡ್ ಹೈಕೋರ್ಟ್ಗೆ ಹೇಳಿಕೆ ನೀಡಿತು.</p>.<p class="title">ಶಂಕಾಸ್ಪದ ಸಾವಿನ ಪ್ರಕರಣ ಸಂಬಂಧ ಆಟೊಚಾಲಕನನ್ನು ಬಂಧಿಸಲಾಗಿದೆ. ಪ್ರಕರಣದ ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳು, ನ್ಯಾಯಾಧೀಶರ ಸಾವಿನ ಪ್ರಕರಣದಲ್ಲಿ ಭಾಗಿಯಾದವರ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಹೇಳಿದರು.</p>.<p class="title">ನ್ಯಾಯಾಧೀಶ, 49 ವರ್ಷದ ಉತ್ತಮ್ ಆನಂದ್ ಅವರು ಜುಲೈ 28ರ ಮುಂಜಾನೆ ಜಾಗಿಂಗ್ಗೆ ಹೋಗಿದ್ದಾಗ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಆಟೊರಿಕ್ಷಾ ಡಿಕ್ಕಿ ಹೊಡೆದಿದ್ದುದು ಬಳಿಕ ಗೊತ್ತಾಗಿತ್ತು.</p>.<p>ಸಿಬಿಐ ವಲಯ ಜಂಟಿ ನಿರ್ದೇಶಕ ಶರದ್ ಅಗರವಾಲ್ ಅವರು, ‘ನ್ಯಾಯಾಧೀಶರ ಸಾವು ಅಪಘಾತವಲ್ಲ. ಅವರ ಸಾವಿನ ಹಿಂದಿನ ಸತ್ಯ ತಿಳಿಯಲು ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ’ ಎಂದು ಹೇಳಿದರು.</p>.<p>‘ಈ ಕೃತ್ಯ ನ್ಯಾಯಾಂಗದ ನೈತಿಕತೆಯನ್ನು ಕುಂದಿಸಿದೆ. ತನಿಖೆ ವಿಳಂಬವಾದಷ್ಟೂ ಸತ್ಯ ತಿಳಿಯುವುದು ಕಷ್ಟವಾಗಬಹುದು’ ಎಂದು ಮುಖ್ಯ ನ್ಯಾಯಮೂರ್ತಿ ರವಿ ರಂಜನ್, ನ್ಯಾಯಮೂರ್ತಿ ಸುಜಿತ್ ನಾರಾಯಣ್ ಪ್ರಸಾದ್ ಅವರಿದ್ದ ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ರಾಂಚಿ (ಪಿಟಿಐ): </strong>ಧನ್ಬಾದ್ ಕೋರ್ಟ್ನ ನ್ಯಾಯಾಧೀಶರಾಗಿದ್ದ ಉತ್ತಮ್ ಆನಂದ್ ಅವರಿಗೆ ಆಟೊ ಚಾಲಕ ಉದ್ದೇಶಪೂರ್ವಕವಾಗಿಯೇ ಡಿಕ್ಕಿ ಹೊಡೆದಿದ್ದ ಎಂದು ಸಿಬಿಐ ಗುರುವಾರ ಜಾರ್ಖಂಡ್ ಹೈಕೋರ್ಟ್ಗೆ ಹೇಳಿಕೆ ನೀಡಿತು.</p>.<p class="title">ಶಂಕಾಸ್ಪದ ಸಾವಿನ ಪ್ರಕರಣ ಸಂಬಂಧ ಆಟೊಚಾಲಕನನ್ನು ಬಂಧಿಸಲಾಗಿದೆ. ಪ್ರಕರಣದ ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳು, ನ್ಯಾಯಾಧೀಶರ ಸಾವಿನ ಪ್ರಕರಣದಲ್ಲಿ ಭಾಗಿಯಾದವರ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಹೇಳಿದರು.</p>.<p class="title">ನ್ಯಾಯಾಧೀಶ, 49 ವರ್ಷದ ಉತ್ತಮ್ ಆನಂದ್ ಅವರು ಜುಲೈ 28ರ ಮುಂಜಾನೆ ಜಾಗಿಂಗ್ಗೆ ಹೋಗಿದ್ದಾಗ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಆಟೊರಿಕ್ಷಾ ಡಿಕ್ಕಿ ಹೊಡೆದಿದ್ದುದು ಬಳಿಕ ಗೊತ್ತಾಗಿತ್ತು.</p>.<p>ಸಿಬಿಐ ವಲಯ ಜಂಟಿ ನಿರ್ದೇಶಕ ಶರದ್ ಅಗರವಾಲ್ ಅವರು, ‘ನ್ಯಾಯಾಧೀಶರ ಸಾವು ಅಪಘಾತವಲ್ಲ. ಅವರ ಸಾವಿನ ಹಿಂದಿನ ಸತ್ಯ ತಿಳಿಯಲು ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ’ ಎಂದು ಹೇಳಿದರು.</p>.<p>‘ಈ ಕೃತ್ಯ ನ್ಯಾಯಾಂಗದ ನೈತಿಕತೆಯನ್ನು ಕುಂದಿಸಿದೆ. ತನಿಖೆ ವಿಳಂಬವಾದಷ್ಟೂ ಸತ್ಯ ತಿಳಿಯುವುದು ಕಷ್ಟವಾಗಬಹುದು’ ಎಂದು ಮುಖ್ಯ ನ್ಯಾಯಮೂರ್ತಿ ರವಿ ರಂಜನ್, ನ್ಯಾಯಮೂರ್ತಿ ಸುಜಿತ್ ನಾರಾಯಣ್ ಪ್ರಸಾದ್ ಅವರಿದ್ದ ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>