ರೈತರ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಮಸೂದೆಗಳಿಗೆ ಇತ್ತೀಚೆಗೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲಾಗಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ಈಗಲೂ ಪ್ರತಿಭಟನೆಗಳು ನಡೆಯುತ್ತಿವೆ.