‘ಈ ಬಿಕ್ಕಟ್ಟಿಗೆ ಮಾತುಕತೆಯೊಂದೇ ಪರಿಹಾರ. ಚರ್ಚೆಗೆ ಸರ್ಕಾರ ಮುಕ್ತ ಮನಸ್ಸಿನಿಂದಿದೆ. ಸ್ವತಃ ಪ್ರಧಾನಿ ಅವರೇ ಇದನ್ನು ಪುನರುಚ್ಚರಿಸಿದ್ದಾರೆ. ರೈತರಿಗೆ ಯಾವುದೇ ಪ್ರಶ್ನೆ ಇದ್ದರೆ, ಮಾತುಕತೆ ನಡೆಸುವ ಅವಕಾಶವನ್ನು ಕೃಷಿ ಸಚಿವರು ಎಂದೂ ನಿರಾಕರಿಸಿಲ್ಲ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.