<p class="title">ಮಧುರೈ: ‘ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ, ಅದನ್ನು ಸಂಘರ್ಷ ಎಂದು ವ್ಯಾಖ್ಯಾನಿಸಲಾಗದು’ ಎಂದು ಕೇಂದ್ರ ಕಾನೂನು ಸಚಿವ ಕಿರೆಣ್ ರಿಜಿಜು ಅವರು ಪ್ರತಿಪಾದಿಸಿದ್ದಾರೆ.</p>.<p class="title">ನ್ಯಾಯಾಂಗ ಮತ್ತು ಸರ್ಕಾರದ ನಡುವೆ ಸಂಘರ್ಷವಿದೆ ಎಂಬ ಮಾಧ್ಯಮ ವರದಿಗಳನ್ನು ಅವರು ಶನಿವಾರ ತಳ್ಳಿಹಾಕಿದರು. ಸಚಿವರು ಮೈಲಾಡುತುರೈನಲ್ಲಿ ಸಿಜೆಎಂಸಿ ಕೋರ್ಟ್ ಉದ್ಘಾಟಿಸಿ ಮಾತನಾಡಿದರು.</p>.<p>‘ಶಾಸಕಾಂಗ, ನ್ಯಾಯಾಂಗದ ನಡುವೆ ಸಂಘರ್ಷವಿಲ್ಲ ಎಂದು ಸ್ಪಷ್ಟಪಡಿಸಲು ನಾನು ಬಯಸುತ್ತೇನೆ. ಭಿನ್ನಾಭಿಪ್ರಾಯಗಳಿವೆ. ಆದರರ್ಥ ಸಂಘರ್ಷವಿದೆ ಎಂಬುದಲ್ಲ. ಇಂತಹ ವರದಿಗಳು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಲಿದೆ. ಈಗ ಪ್ರಜಾಪ್ರಭುತ್ವದ ತೀವ್ರ ಕ್ರಿಯೆಗಳಿವೆ. ಅದು, ಬಿಕ್ಕಟ್ಟು ಅಲ್ಲ’ ಎಂದರು.</p>.<p>ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಅಥವಾ ಶಾಸಕಾಂಗ ಮತ್ತು ನ್ಯಾಯಾಂಗದ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಸಚಿವರು ಈ ಮಾತು ಹೇಳಿದರು.</p>.<p>ನ್ಯಾಯಾಂಗವು ಸ್ವತಂತ್ರವಾಗಿರಬೇಕು ಎಂಬುದನ್ನು ಸರ್ಕಾರ ಬೆಂಬಲಿಸಲಿದೆ. ಕೋರ್ಟ್ ಮತ್ತು ವಕೀಲ ಸಂಘ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಪರಸ್ಪರ ಒಗ್ಗೂಡಿ ಕೆಲಸ ಮಾಡಬೇಕು. ಒಂದನ್ನು ಬಿಟ್ಟು ಇನ್ನೊಂದು ಇರಲಾಗದು. ಕೋರ್ಟ್ ಅಂಗಳದಲ್ಲಿ ಉತ್ತಮ ವಾತಾವರಣ ಇರಬೇಕು ಎಂದು ಹೇಳಿದರು.</p>.<p>ಈ ವರ್ಷ ಸರ್ಕಾರ ವಿವಿಧ ರಾಜ್ಯಗಳ ಕೋರ್ಟ್ಗಳಿಗೆ ಒಟ್ಟು ₹ 9,000 ಕೋಟಿ ಹಂಚಿಕೆ ಮಾಡಿದೆ. ಹೆಚ್ಚು ಅನುದಾನ ಕೇಳಲು ಅನುವಾಗುವಂತೆ ಹಂಚಿಕೆಯಾದ ಅನುದಾನದ ಪೂರ್ಣ ಬಳಕೆಗೆ ಸಚಿವಾಲಯ ಒತ್ತು ನೀಡಿದೆ. ನ್ಯಾಯಾಂಗ ಪೂರ್ಣವಾಗಿ ಕಾಗದ ರಹಿತವಾಗಿರಬೇಕು ಎಂದೂ ಸರ್ಕಾರ ಬಯಸಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಮಧುರೈ: ‘ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ, ಅದನ್ನು ಸಂಘರ್ಷ ಎಂದು ವ್ಯಾಖ್ಯಾನಿಸಲಾಗದು’ ಎಂದು ಕೇಂದ್ರ ಕಾನೂನು ಸಚಿವ ಕಿರೆಣ್ ರಿಜಿಜು ಅವರು ಪ್ರತಿಪಾದಿಸಿದ್ದಾರೆ.</p>.<p class="title">ನ್ಯಾಯಾಂಗ ಮತ್ತು ಸರ್ಕಾರದ ನಡುವೆ ಸಂಘರ್ಷವಿದೆ ಎಂಬ ಮಾಧ್ಯಮ ವರದಿಗಳನ್ನು ಅವರು ಶನಿವಾರ ತಳ್ಳಿಹಾಕಿದರು. ಸಚಿವರು ಮೈಲಾಡುತುರೈನಲ್ಲಿ ಸಿಜೆಎಂಸಿ ಕೋರ್ಟ್ ಉದ್ಘಾಟಿಸಿ ಮಾತನಾಡಿದರು.</p>.<p>‘ಶಾಸಕಾಂಗ, ನ್ಯಾಯಾಂಗದ ನಡುವೆ ಸಂಘರ್ಷವಿಲ್ಲ ಎಂದು ಸ್ಪಷ್ಟಪಡಿಸಲು ನಾನು ಬಯಸುತ್ತೇನೆ. ಭಿನ್ನಾಭಿಪ್ರಾಯಗಳಿವೆ. ಆದರರ್ಥ ಸಂಘರ್ಷವಿದೆ ಎಂಬುದಲ್ಲ. ಇಂತಹ ವರದಿಗಳು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಲಿದೆ. ಈಗ ಪ್ರಜಾಪ್ರಭುತ್ವದ ತೀವ್ರ ಕ್ರಿಯೆಗಳಿವೆ. ಅದು, ಬಿಕ್ಕಟ್ಟು ಅಲ್ಲ’ ಎಂದರು.</p>.<p>ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಅಥವಾ ಶಾಸಕಾಂಗ ಮತ್ತು ನ್ಯಾಯಾಂಗದ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಸಚಿವರು ಈ ಮಾತು ಹೇಳಿದರು.</p>.<p>ನ್ಯಾಯಾಂಗವು ಸ್ವತಂತ್ರವಾಗಿರಬೇಕು ಎಂಬುದನ್ನು ಸರ್ಕಾರ ಬೆಂಬಲಿಸಲಿದೆ. ಕೋರ್ಟ್ ಮತ್ತು ವಕೀಲ ಸಂಘ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಪರಸ್ಪರ ಒಗ್ಗೂಡಿ ಕೆಲಸ ಮಾಡಬೇಕು. ಒಂದನ್ನು ಬಿಟ್ಟು ಇನ್ನೊಂದು ಇರಲಾಗದು. ಕೋರ್ಟ್ ಅಂಗಳದಲ್ಲಿ ಉತ್ತಮ ವಾತಾವರಣ ಇರಬೇಕು ಎಂದು ಹೇಳಿದರು.</p>.<p>ಈ ವರ್ಷ ಸರ್ಕಾರ ವಿವಿಧ ರಾಜ್ಯಗಳ ಕೋರ್ಟ್ಗಳಿಗೆ ಒಟ್ಟು ₹ 9,000 ಕೋಟಿ ಹಂಚಿಕೆ ಮಾಡಿದೆ. ಹೆಚ್ಚು ಅನುದಾನ ಕೇಳಲು ಅನುವಾಗುವಂತೆ ಹಂಚಿಕೆಯಾದ ಅನುದಾನದ ಪೂರ್ಣ ಬಳಕೆಗೆ ಸಚಿವಾಲಯ ಒತ್ತು ನೀಡಿದೆ. ನ್ಯಾಯಾಂಗ ಪೂರ್ಣವಾಗಿ ಕಾಗದ ರಹಿತವಾಗಿರಬೇಕು ಎಂದೂ ಸರ್ಕಾರ ಬಯಸಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>