<p class="title"><strong>ಮುಂಬೈ: </strong>ಭಾರತ್ ಜೋಡೊ ಯಾತ್ರೆಯಲ್ಲಿ ಬುಧವಾರ ರಾತ್ರಿ ಭಾರತದ ರಾಷ್ಟ್ರಗೀತೆ ಬದಲಿಗೆ ನೇಪಾಳದ ರಾಷ್ಟ್ರಗೀತೆ ಕೇಳಿಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅನ್ನು ಬಿಜೆಪಿ ಮುಖಂಡರು ಟೀಕಿಸಿದ್ದಾರೆ.</p>.<p class="title">ಮಹಾರಾಷ್ಟ್ರದ ವಾಶಿಮ್ನಲ್ಲಿ ಬುಧವಾರ ರಾತ್ರಿ ರಾಹುಲ್ ಗಾಂಧಿ ಅವರ ಭಾಷಣ ಇತ್ತು. ಭಾಷಣ ಮುಗಿದ ಬಳಿಕ, ರಾಹುಲ್ ಅವರು ‘ಈಗ ರಾಷ್ಟ್ರಗೀತೆ ಹಾಕಲಿದ್ದಾರೆ’ ಎಂದು ವೇದಿಕೆಯಲ್ಲಿ ನಿಂತುಕೊಂಡರು. ಆದರೆ, ಭಾರತದ ರಾಷ್ಟ್ರಗೀತೆ ಬದಲಿಗೆ, ನೇಪಾಳದ ರಾಷ್ಟ್ರಗೀತೆ ಕೇಳಿಬಂದಿತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು ಎಂದು ಎನ್ಡಿಟಿವಿ ವರದಿ ಮಾಡಿದೆ.</p>.<p class="title">ವೇದಿಕೆಯಲ್ಲಿ ನಿಂತಿದ್ದ ರಾಹುಲ್ ಸೇರಿದಂತೆ ಹಲವು ಮುಖಂಡರು ಒಂದು ಕ್ಷಣ ಅವಕ್ಕಾದರು. ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಮೊಬೈಲ್ನಲ್ಲಿ ಹಾಡು ಹಾಕಿದ ವ್ಯಕ್ತಿಯನ್ನು ಕರೆದು, ಹಾಡನ್ನು ನಿಲ್ಲಿಸುವಂತೆ ಹೇಳಿದರು. ನಂತರ ಭಾರತದ ರಾಷ್ಟ್ರಗೀತೆಯನ್ನು ಹಾಕಲಾಯಿತು.</p>.<p class="Subhead"><strong>ಬಿಜೆಪಿ ಟೀಕೆ: </strong>ಕಾಂಗ್ರಸ್ ನಾಯಕ ರಾಹುಲ್ ಅವರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ತಮಿಳುನಾಡಿನ ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಅವರು ವಿಡಿಯೊವನ್ನು ಟ್ವೀಟ್ ಮಾಡಿ, ‘ರಾಹುಲ್ ಗಾಂಧಿ, ಏನಿದು?’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ: </strong>ಭಾರತ್ ಜೋಡೊ ಯಾತ್ರೆಯಲ್ಲಿ ಬುಧವಾರ ರಾತ್ರಿ ಭಾರತದ ರಾಷ್ಟ್ರಗೀತೆ ಬದಲಿಗೆ ನೇಪಾಳದ ರಾಷ್ಟ್ರಗೀತೆ ಕೇಳಿಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅನ್ನು ಬಿಜೆಪಿ ಮುಖಂಡರು ಟೀಕಿಸಿದ್ದಾರೆ.</p>.<p class="title">ಮಹಾರಾಷ್ಟ್ರದ ವಾಶಿಮ್ನಲ್ಲಿ ಬುಧವಾರ ರಾತ್ರಿ ರಾಹುಲ್ ಗಾಂಧಿ ಅವರ ಭಾಷಣ ಇತ್ತು. ಭಾಷಣ ಮುಗಿದ ಬಳಿಕ, ರಾಹುಲ್ ಅವರು ‘ಈಗ ರಾಷ್ಟ್ರಗೀತೆ ಹಾಕಲಿದ್ದಾರೆ’ ಎಂದು ವೇದಿಕೆಯಲ್ಲಿ ನಿಂತುಕೊಂಡರು. ಆದರೆ, ಭಾರತದ ರಾಷ್ಟ್ರಗೀತೆ ಬದಲಿಗೆ, ನೇಪಾಳದ ರಾಷ್ಟ್ರಗೀತೆ ಕೇಳಿಬಂದಿತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು ಎಂದು ಎನ್ಡಿಟಿವಿ ವರದಿ ಮಾಡಿದೆ.</p>.<p class="title">ವೇದಿಕೆಯಲ್ಲಿ ನಿಂತಿದ್ದ ರಾಹುಲ್ ಸೇರಿದಂತೆ ಹಲವು ಮುಖಂಡರು ಒಂದು ಕ್ಷಣ ಅವಕ್ಕಾದರು. ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಮೊಬೈಲ್ನಲ್ಲಿ ಹಾಡು ಹಾಕಿದ ವ್ಯಕ್ತಿಯನ್ನು ಕರೆದು, ಹಾಡನ್ನು ನಿಲ್ಲಿಸುವಂತೆ ಹೇಳಿದರು. ನಂತರ ಭಾರತದ ರಾಷ್ಟ್ರಗೀತೆಯನ್ನು ಹಾಕಲಾಯಿತು.</p>.<p class="Subhead"><strong>ಬಿಜೆಪಿ ಟೀಕೆ: </strong>ಕಾಂಗ್ರಸ್ ನಾಯಕ ರಾಹುಲ್ ಅವರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ತಮಿಳುನಾಡಿನ ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಅವರು ವಿಡಿಯೊವನ್ನು ಟ್ವೀಟ್ ಮಾಡಿ, ‘ರಾಹುಲ್ ಗಾಂಧಿ, ಏನಿದು?’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>