ಈ ಮೂಲಕ ದಿಗ್ವಿಜಯ್ ಸಿಂಗ್, ರಾಮಮಂದಿರಕ್ಕೆ ದೇಣಿಗೆ ಸಲ್ಲಿಸಿದ ಮೊದಲ ಕಾಂಗ್ರೆಸ್ಸಿಗರಾಗಿದ್ದು, ಪ್ರಧಾನಿಗೆ ಚೆಕ್ ಕಳುಹಿಸಿಕೊಟ್ಟಿದ್ದಾರೆ. ದೇಣಿಗೆಯ ಚೆಕ್ ಜೊತೆಗೆ ಎರಡು ಪುಟಗಳ ಪತ್ರ ಬರೆದಿರುವ ಅವರು, ಈ ಹಿಂದೆ ರಾಮ ಮಂದಿರ ನಿರ್ಮಾಣಕ್ಕೆ ವಿಎಚ್ಪಿ ಸಂಗ್ರಹಿಸಿದ ದೇಣಿಗೆಯ ವಿವರವಾದ ಹೇಳಿಕೆ ಬಿಡುಗಡೆ ಮಾಡಲು ಸೂಚಿಸುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.