<p><strong>ನವದೆಹಲಿ</strong>: ಅಕ್ಟೋಬರ್ 17ರಂದು ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ನಿರ್ಧರಿಸಿದ್ದಾರೆ.</p>.<p>ಇಂದು ರಾತ್ರಿಯೇ ಅವರು ರಾಜಧಾನಿ ದೆಹಲಿಗೆ ತಲುಪಲಿದ್ಧಾರೆ.</p>.<p>ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರ ಸ್ವಂತ ನಿರ್ಧಾರವಾಗಿದ್ದು, ಗಾಂಧಿ ಕುಟುಂಬದಿಂದ ಅವರಿಗೆ ಯಾವುದೇ ಸೂಚನೆ ಬಂದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.</p>.<p>ಸೆಪ್ಟೆಂಬರ್ 30ರಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ನಾಮಪತ್ರ ಸಲ್ಲಿಸಲಿದ್ದಾರೆ.</p>.<p>ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರನ್ನು ಕಣಕ್ಕಿಳಿಸುವುದು ಗಾಂಧಿ ಕುಟುಂಬದ ನಿರ್ಧಾರವಾಗಿತ್ತು. ಆದರೆ, ಈ ಮಧ್ಯೆ ರಾಜಸ್ಥಾನಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ನಡೆಯಬೇಕಿದ್ದ ಪಕ್ಷದ ಶಾಸಕಾಂಗ ಸಭೆ ಧಿಕ್ಕರಿಸಿ ಬಂಡಾಯ ಶಾಸಕರು ಮತ್ತೊಂದು ಸಭೆ ನಡೆಸಿ, ಗೆಹಲೋತ್ ಪಕ್ಷದ ಅಧ್ಯಕ್ಷ ಹುದ್ದೆ ಅಲಂಕರಿಸುವುದರ ವಿರುದ್ಧ ತಮ್ಮ ಅಸಮಾಧಾನ ತೋರ್ಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಕ್ಟೋಬರ್ 17ರಂದು ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ನಿರ್ಧರಿಸಿದ್ದಾರೆ.</p>.<p>ಇಂದು ರಾತ್ರಿಯೇ ಅವರು ರಾಜಧಾನಿ ದೆಹಲಿಗೆ ತಲುಪಲಿದ್ಧಾರೆ.</p>.<p>ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರ ಸ್ವಂತ ನಿರ್ಧಾರವಾಗಿದ್ದು, ಗಾಂಧಿ ಕುಟುಂಬದಿಂದ ಅವರಿಗೆ ಯಾವುದೇ ಸೂಚನೆ ಬಂದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.</p>.<p>ಸೆಪ್ಟೆಂಬರ್ 30ರಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ನಾಮಪತ್ರ ಸಲ್ಲಿಸಲಿದ್ದಾರೆ.</p>.<p>ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರನ್ನು ಕಣಕ್ಕಿಳಿಸುವುದು ಗಾಂಧಿ ಕುಟುಂಬದ ನಿರ್ಧಾರವಾಗಿತ್ತು. ಆದರೆ, ಈ ಮಧ್ಯೆ ರಾಜಸ್ಥಾನಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ನಡೆಯಬೇಕಿದ್ದ ಪಕ್ಷದ ಶಾಸಕಾಂಗ ಸಭೆ ಧಿಕ್ಕರಿಸಿ ಬಂಡಾಯ ಶಾಸಕರು ಮತ್ತೊಂದು ಸಭೆ ನಡೆಸಿ, ಗೆಹಲೋತ್ ಪಕ್ಷದ ಅಧ್ಯಕ್ಷ ಹುದ್ದೆ ಅಲಂಕರಿಸುವುದರ ವಿರುದ್ಧ ತಮ್ಮ ಅಸಮಾಧಾನ ತೋರ್ಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>