ಇತ್ತೀಚಿನ ಚುನಾವಣೆಗಳು, ಚುನಾವಣಾ ಆಯೋಗದ ನಡವಳಿಕೆ ಕುರಿತು ಗಂಭೀರವಾಗಿ ಚಿಂತಿಸುವಂತೆ ಮಾಡಿವೆ. ಇಂಥ ಚುನಾವಣಾ ಆಯೋಗವನ್ನು ವಿಸರ್ಜಿಸಬೇಕು. ಚುನಾವಣೆ ನಡೆದಿರುವ ರಾಜ್ಯಗಳಲ್ಲಿ ಮತದಾರರ ವಿಶ್ವಾಸಕ್ಕೆ ದ್ರೋಹ ಬಗೆಯುವಂತಹ ಉದಾಹರಣೆಗಳಿದ್ದು, ಈ ಸಂಬಂಧ ಆಯೋಗದ ಸದಸ್ಯರು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಶರ್ಮಾ ಒತ್ತಾಯಿಸಿದ್ದಾರೆ.